September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಇಲ್ಲಿ ತೆಗೆಯುವ ಒಂದೊಂದು ಅಂಕವೂ ಭವಿಷ್ಯಕ್ಕೆ ಬುನಾದಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಜೀವ ಶಾಸ್ತ್ರ, ಅಥವಾ ಇತರ ಆಯ್ಕೆಯ ವಿಜ್ಞಾನ ವಿಷಯಗಳಲ್ಲಿ ತಲಾ 30 ರಂತೆ 3 ವಿಷಯಗಳಿಗೆ ಒಟ್ಟು 90 ಅಂಕಗಳಿವೆ.

ವಿದ್ಯಾರ್ಥಿಯ ಅತ್ಯುತ್ತಮ ಫಲಿತಾಂಶಕ್ಕೆ ಪ್ರಾಯೋಗಿಕ ಪರೀಕ್ಷೆಯ ಅಂಕಗಳು ತೀರಾ ಅವಶ್ಯ. ಜೊತೆಗೆ ಸಿ ಇ ಟಿ ಪರೀಕ್ಷೆಗೆ ಪಿಯು ಅಂಕಗಳನ್ನು ಕೂಡಾ ಪರಿಗಣನೆಗೆ ತೆಗೆದುಕೊಳ್ಳುವುದರಿಂದ , ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ನಿರ್ಲಕ್ಷಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ತೀರಾ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆಗಳಿಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಲು ಇಲಾಖೆಯನ್ನು ಕೋರಲು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅವರನ್ನು ಕೆಲವು ಉಪನ್ಯಾಸಕರು ಸಂಪರ್ಕಿಸಿ, ವಿನಂತಿಸಿದ್ದರು. ರಕ್ಷಿತ್ ಶಿವರಾಂ ಅವರು ಈ ಕುರಿತು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕಾರಿಗಳ ಗಮನ ಸೆಳೆದರು.


ಇದೀಗ ಮಂಡಳಿಯು ಈ ತಿಂಗಳ 24, 25 ಹಾಗೂ 27 ರಂದು ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರಿಗೆ ಆದೇಶ ಹೊರಡಿಸಿದೆ. ಆ ಮೂಲಕ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆ ತೆಗೆದು ಕೊಳ್ಳಲು ಅಸಾಧ್ಯವಾದ ವಿದ್ಯಾರ್ಥಿಗಳಿಗೆ ಮರು ಅವಕಾಶ ಕಲ್ಪಿಸಿದೆ. ತಮ್ಮ ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವರಾಂ ಅವರಿಗೆ ಸಮಸ್ತ ವಿದ್ಯಾರ್ಥಿಗಳ ಪರವಾಗಿ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!