23.1 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya
error: Content is protected !!