ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಆಶಾಲತಾ ಪ್ರಶಾಂತ ರವರಿಗೆ ಜೇಸಿ ವಲಯ ಮಟ್ಟದ “ಸಾಧನಾ ಶ್ರೀ” ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

80ನೇ ಸ್ವಾತಂತ್ರ್ಯೋತ್ಸವದಲ್ಲಿ ಕಂಗೊಳಿಸಿದ ಬ್ರೈಟ್ ಹೊರೈಝನ್

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya
error: Content is protected !!