July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

ಕರ್ನಾಟಕ ಮಂದಿರ ಮಹಾಸಂಘವು 15 ಫೆಬ್ರವರಿ 2025 ರಂದು ಬೆಳ್ತಂಗಡಿ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ 1 ದಿನದ ತಾಲೂಕು ಮಟ್ಟದ ಮಂದಿರ ಅಧಿವೇಶನವನ್ನು ಏರ್ಪಡಿಸಲಾಗಿತ್ತು. ಈ ಅಧಿವೇಶನದಲ್ಲಿ 80 ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಭಾಗವಹಿಸಿದ್ದರು. ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಅಧಿವೇಶನದಲ್ಲಿ ಕೆಲವು ಮುಖ್ಯ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಸರಕಾರವು ಅನುಷ್ಠಾನಕ್ಕೆ ತರಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾ ಸಂಘದ ತಾಲೂಕಿನ ಸಮನ್ವಯಕರು ಜಯಸಾಲಿಯಾನ್ ಬಲೆಂಜ, ಸದಾಶಿವ ಹೊಳ್ಳ , ಗಣಪತಿ ಸುಬ್ರಮಣ್ಯ ದೇವಸ್ಥಾನ ಮಲೆಬೆಟ್ಟು. ವಾಮನ ಬಾಳಿಗ, ಶ್ರೀ ಮೂಜುಲ್ನಾಯ ಬ್ರಹ್ಮ ದೈವಸ್ಥಾನ ಪಡಂಗಡಿ . ಸಂತೋಷ್ ಕುಮಾರ್ ಶ್ರೀ ನಾಗಂಬಿಕಾ ದೇವಸ್ಥಾನ ಮುಂಡೂರು. ಹರೀಶ ಮುದ್ದಿನಡ್ಕ, ಶ್ರೀ ರಾಮ ಭಜನಾ ಮಂದಿರ ಪೆರಿಯಡ್ಕ. ಹಾಗೂ ಯೋಗೀಶ್ ಕೆಂಬರ್ಜೆ ಇವರುಗಳು ಉಪಸ್ಥಿತರಿದ್ದರು.

Related posts

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya
error: Content is protected !!