September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಇಲ್ಲಿ ತೆಗೆಯುವ ಒಂದೊಂದು ಅಂಕವೂ ಭವಿಷ್ಯಕ್ಕೆ ಬುನಾದಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಜೀವ ಶಾಸ್ತ್ರ, ಅಥವಾ ಇತರ ಆಯ್ಕೆಯ ವಿಜ್ಞಾನ ವಿಷಯಗಳಲ್ಲಿ ತಲಾ 30 ರಂತೆ 3 ವಿಷಯಗಳಿಗೆ ಒಟ್ಟು 90 ಅಂಕಗಳಿವೆ.

ವಿದ್ಯಾರ್ಥಿಯ ಅತ್ಯುತ್ತಮ ಫಲಿತಾಂಶಕ್ಕೆ ಪ್ರಾಯೋಗಿಕ ಪರೀಕ್ಷೆಯ ಅಂಕಗಳು ತೀರಾ ಅವಶ್ಯ. ಜೊತೆಗೆ ಸಿ ಇ ಟಿ ಪರೀಕ್ಷೆಗೆ ಪಿಯು ಅಂಕಗಳನ್ನು ಕೂಡಾ ಪರಿಗಣನೆಗೆ ತೆಗೆದುಕೊಳ್ಳುವುದರಿಂದ , ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ನಿರ್ಲಕ್ಷಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ತೀರಾ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆಗಳಿಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಲು ಇಲಾಖೆಯನ್ನು ಕೋರಲು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅವರನ್ನು ಕೆಲವು ಉಪನ್ಯಾಸಕರು ಸಂಪರ್ಕಿಸಿ, ವಿನಂತಿಸಿದ್ದರು. ರಕ್ಷಿತ್ ಶಿವರಾಂ ಅವರು ಈ ಕುರಿತು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕಾರಿಗಳ ಗಮನ ಸೆಳೆದರು.


ಇದೀಗ ಮಂಡಳಿಯು ಈ ತಿಂಗಳ 24, 25 ಹಾಗೂ 27 ರಂದು ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರಿಗೆ ಆದೇಶ ಹೊರಡಿಸಿದೆ. ಆ ಮೂಲಕ ಅನಿವಾರ್ಯ ಕಾರಣಗಳಿಂದ ಪ್ರಾಯೋಗಿಕ ಪರೀಕ್ಷೆ ತೆಗೆದು ಕೊಳ್ಳಲು ಅಸಾಧ್ಯವಾದ ವಿದ್ಯಾರ್ಥಿಗಳಿಗೆ ಮರು ಅವಕಾಶ ಕಲ್ಪಿಸಿದೆ. ತಮ್ಮ ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವರಾಂ ಅವರಿಗೆ ಸಮಸ್ತ ವಿದ್ಯಾರ್ಥಿಗಳ ಪರವಾಗಿ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya
error: Content is protected !!