ಗೇರಕಟ್ಟೆ : ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ ನಡೆಯಿತು. ಕಳಿಯ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಮಜಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಭೆಯ ಅಧ್ಯಕ್ಷ ಸ್ಥಾನವನ್ನು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಮೋಹನ ಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಪುಷ್ಪ ಮೆಟ್ರಿಕ್ ಮೇಳದ ಪರಿಚಯದ ಭಿತ್ತಿ ಪತ್ರವನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ ಕೃಷ್ಣರವರು ಉಪಸ್ಥಿತರಿದ್ದು ಮೆಟ್ರಿಕ್ ಮೇಳದ ಮಳಿಗೆಗಳಿಗೆ ಚಾಲನೆ ನೀಡಿದರು.

ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಸ್ರಣ್ಣರವರು ಶಾಲಾ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ನೂರು ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಶಾಲೆಯ ಪರವಾಗಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ರೀತಾ ಚಂದ್ರಶೇಖರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಪೆಂರ್ಬುಡ ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕರಾದ ಚೇತನಾಕ್ಷಿ ದೈಹಿಕ ಪರಿವೀಕ್ಷಣಾಧಿಕಾರಿಯಾದ ಸುಜಯ್ ರವರು ಮೆಟ್ರಿಕ್ ಮೇಳಕ್ಕೆ ಭೇಟಿ ನೀಡಿ ಪ್ರಶಂಸೆಯನ್ನು ವ್ಯಕ್ತಪಡಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ರೊನಾಲ್ಡ್ ಡಿಮೆಲ್ಲೊರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು ಸಹ ಶಿಕ್ಷಕಿ ಕವಿತಾ ರವರು ಸ್ವಾಗತಿಸಿದರು. ಸಹ ಶಿಕ್ಷಕಿ ಇಂದುಶ್ರೀ ರೈ ಹೆಚ್.ಅವರು ವಂದಿಸಿದರು. ಸಹಶಿಕ್ಷಕಿ ಸಿಸಿಲಿಯಾ ಫ್ಲಾವಿಯಾ ಡಿಕೋಸ್ತ ನಿರೂಪಣೆ ಮಾಡಿದರು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಶಾಲಾ ಶಿಕ್ಷಕರು ಹಾಗೂ ಪೋಷಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಶಾಲಾ ವಿಧ್ಯಾರ್ಥಿಗಳು 20 ಹೆಚ್ಚಿನ ಮಳಿಗೆಗಳ ಮೂಲಕ ಹಲವಾರು ಬಗೆಯ ತರಕಾರಿ, ಬೇಕರಿ ಮತ್ತು ಹಣ್ಣು ಹಂಪಲುಗಳನ್ನು ವ್ಯಾಪಾರ ವಹಿವಾಟು ನಡೆಸಿದರು.