27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

ಮಡಂತ್ಯಾರು: ಮಡಂತ್ಯಾರು ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ ಮತ್ತು ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ ಫೆ.22ರಂದು ಮಡಂತ್ಯಾರು ಸಮೀಪದ ಕಡ್ತಿಲ ಎಸ್ಟೇಟ್ ನಲ್ಲಿ ಜರುಗಿತು.

ಸಂಘದ ಅಧ್ಯಕ್ಷ ಅಧ್ಯಕ್ಷ ವೆಂಕಪ್ಪ ಪೂಜಾರಿ ಕೋಡ್ಲಕ್ಕೆ ಅಧ್ಯಕ್ಷತೆ ವಹಿಸಿದ್ದರು. ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲ ಡಾ.ನವೀನ್ ಮರಿಕೆ ದಿಕ್ಸೂಚಿ ಭಾಷಣ ಮಾಡಿದರು.

ಬೆಳ್ತಂಗಡಿ ಗುರು ನಾರಾಯಣಸ್ವಾಮಿ ಸೇವಾ ಸಂಘ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಮಡಂತ್ಯಾರು ಗ್ರಾ.ಪಂ.ಅಧ್ಯಕ್ಷೆ ರೂಪ ನವೀನ್ ಕೋಡ್ಲಕ್ಕೆ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್, ಮಚ್ಚಿನ ಶ್ರೀ ಗುರು ನಾರಾಯಣ ಸೇವಾ ಸಂಘ ನಿರ್ದೇಶಕ ಪ್ರಮೋದ್ ಕುಮಾರ್ , ಗೌರವಾಧ್ಯಕ್ಷ ಯೋಗೇಶ್ ಪೂಜಾರಿ ಕಡ್ತಿಲ, ಮಾಜಿ ಶಾಸಕ ದಿ. ವಸಂತ ಬಂಗೇರ ಪುತ್ರಿ ಬಿನುತಾ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಮಾಜಿ ಶಾಸಕ ಪ್ರಭಾಕರ ಬಂಗೇರ, ಪ್ರಮುಖರಾದ ಮೋನಪ್ಪ ಕಂಡೆತ್ಯಾರು, ವಸಂತ್ ಸಾಲ್ಯಾನ್ ಕಾಪಿನಡ್ಕ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಸಚಿನ್ ಪೂಜಾರಿ ಅರ್ಭುಂಡ, ಕಾರ್ಯದರ್ಶಿ ಸುಭಾಷ್ ಚಂದ್ರ ಪೂಜಾರಿ ಹಾರಬೆ, ಮಹಿಳಾ ಸಂಘದ ಅಧ್ಯಕ್ಷೆ ಆಶಾ ಉಮೇಶ್ ಕೋಟೆ, ಕಾರ್ಯದರ್ಶಿ ಮಲ್ಲಿಕಾ ಹರಿಶ್ಚಂದ್ರ ಕೋಡ್ಲಕ್ಕೆ, ಯುವ ಬಿಲ್ಲವ ವೇದಿಕೆ ಕಾರ್ಯದರ್ಶಿ ಶರತ್ ಪೂಜಾರಿ ಹಾರಬೆ, ಪ್ರಮುಖರಾದ ಪುನೀತ್ ಕುಮಾರ್ ಮಾಲಾಡಿ, ಪ್ರಶಾಂತ್ ಪಾರೆಂಕಿ, ವಿಶ್ವನಾಥ್ ಪೂಜಾರಿ ಹಾರಾಬೆ, ಸತೀಶ್ ಸುವರ್ಣ, ವಿಶ್ವನಾಥ್ ಪೂಜಾರಿ ಕೋಟೆ, ಗಿರಿಯಪ್ಪ ಪೂಜಾರಿ ಕೋಡ್ಲಕ್ಕೆ, ತುಳಸಿ ಹಾರಬೆ , ಶೇಷಗಿರಿ ನಾಯಕ್ , ಉಮೇಶ್ ಸುವರ್ಣ ಅಲೆಕ್ಕಿ, ಉಮೇಶ್ ಕೋಟೆ, ಯೋಗೀಶ್ ಕೊಡ್ಲಕ್ಕೆ, ನವೀನ್ ಕೊಡ್ಲಕ್ಕೆ ಸಹಿತ ಮತ್ತಿತರರು ಉಪಸ್ಥಿತರಿದ್ದರು.
ಗುರು ಪೂಜೆಯ ಬಳಿಕ ಸಭಾ ಕಾರ್ಯಕ್ರಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ಸಮಾಜದ ಪ್ರತಿಭೆಗಳಿಂದ ಸಾಂಸ್ಕೃತಿಕ ಝೇಂಕಾರ ಜರುಗಿತು.

ಸಂಯುಕ್ತ್ ಕಡ್ತಿಲ, ಪ್ರಜ್ಞಾ ಡಿ.ಪಿ.ದೋಟ, ಅನ್ವಿತಾ ನವೀನ್ ಉರ್ಲ, ಹಂಸಿನಿ ಹಾರಾಬೆ, ನವೀನ್ ಕೋಡ್ಲಕ್ಕೆ ಹಾಗೂ ದಿಕ್ಷೀತ್ ಪಾರೆಂಕಿ ಸನ್ಮಾನ ಪತ್ರ ವಾಚಿಸಿದರು. ಪ್ರವೀಣ್ ಕುಮಾರ್ ದೋಟ ಕಾರ್ಯಕ್ರಮ ನಿರೂಪಿಸಿದರು.

ಸಾಧಕರಿಗೆ ಸನ್ಮಾನ:
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಾದ ಬೂದಿ ಪೂಜಾರಿ ಕೋಟೆ, ಡಾ.ನವೀನ್ ಮರಿಕೆ, ಸತೀಶ್ ಪೂಜಾರಿ ಕೋಟೆ, ಸಚಿನ್ ಕೋಡ್ಲಕ್ಕೆ, ನಿತಿನ್ ಕುಮಾರ್ ಕೋಟೆ ಹಾಗೂ ಪ್ರದೀಪ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

Related posts

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!