26.1 C
ಪುತ್ತೂರು, ಬೆಳ್ತಂಗಡಿ
September 11, 2026
ಕ್ರೀಡಾ ಸುದ್ದಿ

ಬಂದಾರು : ದ.ಕ.ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ – ಕುಂಭಾ ಸಮಾಗಮ

ಬಂದಾರು: ಕುಂಬಾರರ ಸೇವಾ ಸಂಘ, ಶ್ರೀಮರಾಮ ನಗರ ಜೈ ಶ್ರೀರಾಮ್ ಗೆಳೆಯರ ಬಳಗ ವತಿಯಿಂದ ದ.ಕ.ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ ಕುಂಭಾ ಸಮಾಗಮ ಫೆ.22ರಂದು ಬಂದಾರು ಶ್ರೀ ರಾಮನಗರದಲ್ಲಿ ನಡೆಯಿತು.

ಬಂದಾರು ಕುಂಬಾರ ಸೇವಾ ಸಂಘದ ಅಧ್ಯಕ್ಷ ಕೆಂಚಪ್ಪ ಕುಂಬಾರ ಅಧ್ಯಕ್ಷತೆ ವಹಿಸಿದ್ದರು. ಕುಂಬಾರರ ಮಹಾಸಂಘದ ರಾಜ್ಯಾಧ್ಯಕ್ಷ ಶಿವಕುಮಾರ್ ಚೌಡ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಂಗಳೂರು ಕರಾವಳಿ ಕುಂಬಾರರ ಯುವ ವೇದಿಕೆಯ ಸ್ಥಾಪಕಾಧ್ಯಕ್ಷ ಡಾ.ಅಣ್ಣಯ್ಯ ಕುಲಾಲ್,
ಬೆಳ್ತಂಗಡಿ ಕುಂಬಾರರ ಯಾನೆ ಮೂಲ್ಯರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ, ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ಶುಭಾ ಹಾರೈಸಿದರು. ನಿವೃತ್ತ ಕಂದಾಯ ಅಧಿಕಾರಿ ಪದ್ಮಕುಮಾರ್ ಹೆಚ್, ಬಂದಾರು ಗ್ರಾ.ಪಂ.ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕುಂಬಾರರ ಗುಡಿ ಕೈಗಾರಿಕೆ ಸಹಕಾರಿ ಸಂಘದ ದಾಮೋದರ್, ಕೆರೆಮಜಲು ರವೀಂದ್ರ ಪಾಂಗಣ್ಣಾಯ, ಕುರಿಯಾಳಕೊಪ್ಪ ಲಕ್ಷ್ಮೀ ಜನಾರ್ಧನ ದೇವಸ್ಥಾನ ಪ್ರಧಾನ ಕಾರ್ಯದರ್ಶಿ ಗಂಗಾಧರ ಕುಂಬಾರ, ಜೈ ಶ್ರೀರಾಮ್ ಗೆಳೆಯರ ಬಳಗ ಅಧ್ಯಕ್ಷ ಶ್ರೀಧರ ಬಿ.ಕೆ., ಗುರಿಕಾರರಾದ ಬಾಬು ಕುಂಬಾರ, ಶೀನಪ್ಪ ಕುಂಬಾರ ಹಾಗೂ ಮೊನಪ್ಪ ಕುಂಬಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಮುಖರಾದ ರಾಜೇಶ್ ನವಶಕ್ತಿ, ಪ್ರಶಾಂತ್, ರಕ್ಷಿತ್ ಶೆಟ್ಟಿ ಪಣೆಕ್ಕರ, ಮೋಹನ್ ಬಂಗೇರ, ಬಾಲಕೃಷ್ಣ ಗೌಡ ಮುಗೇರಡ್ಕ, ಕುಶಾಲಪ್ಪ ಗೌಡ, ರವಿ ಇಳಂತಿಲ, ದಯಾನಂದ, ತಿಮ್ಮಪ್ಪ ಶೆಟ್ಟಿ, ಹೇಮಂತ್, ರಾಜು , ವಿವಿಧ ಕಡೆಗಳ ಗುರಿಕಾರರು ಸಹಿತ ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಕ್ರೀಡಾ ಪಟುಗಳಿಗೆ, ಸಾಧಕರನ್ನು ಸನ್ಮಾನಿಸಲಾಯಿತು. ಬೆಳಿಗ್ಗೆ ಗಣಹೋಮ, ಸಂಜೆ ಭಜನಾ ಕಾರ್ಯಕ್ರಮ, ಸಭಾ ಕಾರ್ಯಕ್ರಮ ಜರುಗಿ ಸ್ವಜಾತಿ ಬಾಂಧವರ ವಾಲಿಬಾಲ್ ಪಂದ್ಯಾಟ ನಡೆಯಿತು.

ಕ್ರೀಡಾ ಕೂಟ ಸಮಿತಿ ಕಾರ್ಯದರ್ಶಿ ಉದಯ ಬಿ.ಕೆ. ಸ್ವಾಗತಿಸಿ, ದೀಕ್ಷಾ ವಂದಿಸಿ, ವಿಜಯ್ ಕಾರ್ಯತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya
error: Content is protected !!