September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರಧಾನ ಕಾರ್ಯಕ್ರಮವು ಫೆ.22ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೊ ವಹಿಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಪ್ರಾಂಶುಪಾಲ ಫಾ| ವಿಜಯ್ ಲೋಬೊ ಮಾತನಾಡಿ ವಿದ್ಯಾರ್ಥಿಗಳು ಸಮಾಜದ ದೀಪಗಳಾಗಿ ಬೆಳಗುವಂತೆ ಕರೆಯಿತ್ತರು.

ವಿದ್ಯಾರ್ಥಿಗಳು ಜಗತ್ತಿನ ಬೆಳಕಾಗುವಂತೆ ದೀಪ ಪ್ರಧಾನ ಮಾಡಲಾಯಿತು. 9ನೇ ತರಗತಿಯ ವಿದ್ಯಾರ್ಥಿ ಫಾತಿಮತ್ ಶಿಯಾ ಎಲ್ಲಾ ಕಿರಿಯ ವಿದ್ಯಾರ್ಥಿಗಳ ಪರವಾಗಿ ಶುಭ ಹಾರೈಸಿದರು.

ಕಿರಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮನೋರಂಜನಾ ಕ್ರೀಡೆಗಳನ್ನು ನಡೆಸಿಕೊಟ್ಟರು. ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಂಸ್ಥೆಗೆ 10ನೇ ತರಗತಿಯ ವಿದ್ಯಾರ್ಥಿಗಳು ಜೆರಾಕ್ಸ್ ಯಂತ್ರವನ್ನು ಕಾಣಿಕೆಯಾಗಿ ನೀಡಿದರು. ಕು. ಶ್ರಾವನ್ಯ ಮತ್ತು ಜೆವಿಟಾ

ಕಾರ್ಯಕ್ರಮ ನಿರೂಪಿಸಿದರು. ರೋಸಾ ಜೋಯ್ ಸ್ವಾಗತಿಸಿ, ಇಶ್ಮಾ ಫಾತಿಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅನುದೀಪ ೨೦೨೪-೨೫ರ ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು.

Related posts

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya
error: Content is protected !!