23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರಧಾನ ಕಾರ್ಯಕ್ರಮವು ಫೆ.22ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೊ ವಹಿಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಪ್ರಾಂಶುಪಾಲ ಫಾ| ವಿಜಯ್ ಲೋಬೊ ಮಾತನಾಡಿ ವಿದ್ಯಾರ್ಥಿಗಳು ಸಮಾಜದ ದೀಪಗಳಾಗಿ ಬೆಳಗುವಂತೆ ಕರೆಯಿತ್ತರು.

ವಿದ್ಯಾರ್ಥಿಗಳು ಜಗತ್ತಿನ ಬೆಳಕಾಗುವಂತೆ ದೀಪ ಪ್ರಧಾನ ಮಾಡಲಾಯಿತು. 9ನೇ ತರಗತಿಯ ವಿದ್ಯಾರ್ಥಿ ಫಾತಿಮತ್ ಶಿಯಾ ಎಲ್ಲಾ ಕಿರಿಯ ವಿದ್ಯಾರ್ಥಿಗಳ ಪರವಾಗಿ ಶುಭ ಹಾರೈಸಿದರು.

ಕಿರಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮನೋರಂಜನಾ ಕ್ರೀಡೆಗಳನ್ನು ನಡೆಸಿಕೊಟ್ಟರು. ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಂಸ್ಥೆಗೆ 10ನೇ ತರಗತಿಯ ವಿದ್ಯಾರ್ಥಿಗಳು ಜೆರಾಕ್ಸ್ ಯಂತ್ರವನ್ನು ಕಾಣಿಕೆಯಾಗಿ ನೀಡಿದರು. ಕು. ಶ್ರಾವನ್ಯ ಮತ್ತು ಜೆವಿಟಾ

ಕಾರ್ಯಕ್ರಮ ನಿರೂಪಿಸಿದರು. ರೋಸಾ ಜೋಯ್ ಸ್ವಾಗತಿಸಿ, ಇಶ್ಮಾ ಫಾತಿಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅನುದೀಪ ೨೦೨೪-೨೫ರ ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು.

Related posts

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya
error: Content is protected !!