July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರಧಾನ ಕಾರ್ಯಕ್ರಮವು ಫೆ.22ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೊ ವಹಿಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಪ್ರಾಂಶುಪಾಲ ಫಾ| ವಿಜಯ್ ಲೋಬೊ ಮಾತನಾಡಿ ವಿದ್ಯಾರ್ಥಿಗಳು ಸಮಾಜದ ದೀಪಗಳಾಗಿ ಬೆಳಗುವಂತೆ ಕರೆಯಿತ್ತರು.

ವಿದ್ಯಾರ್ಥಿಗಳು ಜಗತ್ತಿನ ಬೆಳಕಾಗುವಂತೆ ದೀಪ ಪ್ರಧಾನ ಮಾಡಲಾಯಿತು. 9ನೇ ತರಗತಿಯ ವಿದ್ಯಾರ್ಥಿ ಫಾತಿಮತ್ ಶಿಯಾ ಎಲ್ಲಾ ಕಿರಿಯ ವಿದ್ಯಾರ್ಥಿಗಳ ಪರವಾಗಿ ಶುಭ ಹಾರೈಸಿದರು.

ಕಿರಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮನೋರಂಜನಾ ಕ್ರೀಡೆಗಳನ್ನು ನಡೆಸಿಕೊಟ್ಟರು. ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಂಸ್ಥೆಗೆ 10ನೇ ತರಗತಿಯ ವಿದ್ಯಾರ್ಥಿಗಳು ಜೆರಾಕ್ಸ್ ಯಂತ್ರವನ್ನು ಕಾಣಿಕೆಯಾಗಿ ನೀಡಿದರು. ಕು. ಶ್ರಾವನ್ಯ ಮತ್ತು ಜೆವಿಟಾ

ಕಾರ್ಯಕ್ರಮ ನಿರೂಪಿಸಿದರು. ರೋಸಾ ಜೋಯ್ ಸ್ವಾಗತಿಸಿ, ಇಶ್ಮಾ ಫಾತಿಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅನುದೀಪ ೨೦೨೪-೨೫ರ ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು.

Related posts

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya
error: Content is protected !!