23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

ಉಜಿರೆ: ನೀವು ಉದ್ಯಮಶೀಲರಾಬೇಕಾದರೆ ಸಂವಹನ ಕೌಶಲ್ಯ ಇರಬೇಕು, ಒಬ್ಬ ಉದ್ಯಮಿ ಉದ್ಯಮದ ಲಾಭ-ನಷ್ಟಗಳನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಇರಬೇಕು. ನೀವು ಆರಂಭಿಸುವ ಉದ್ಯಮಕ್ಕೆ ಒಂದು ಸರಿಯಾದ ದೃಷ್ಟಿಕೋನ ಇರಬೇಕು. ಪ್ರಾಮಾಣಿಕತೆ ಇರಬೇಕು. ನಿಮ್ಮ ಸ್ವಷ್ಟವಾದ ಗುರಿ, ಉದ್ದೇಶ ಇದ್ದು, ನೀವು ಪ್ರಾಮಾಣಿಕರಾಗಿದ್ದರೆ ನಿಮಗೆ ಬೇರೆ ಬೇರೆ ಮೂಲಗಳಿಂದ ಹಣಕಾಸು ನೆರವು ಬರುತ್ತದೆ. ಇದರ ಜೊತೆಗೆ ಹಣಕಾಸಿನ ನಿರ್ವಹಣೆ ಅಂದರೆ ಸರಿಯಾದ ಲೆಕ್ಕಚಾರ ನೀವು ಇಟ್ಟುಕೊಳ್ಳಬೇಕು. ಇನ್ನು ಉದ್ಯಮಕ್ಕೆ ಬೇಕಾಗುವ ಕೆಲಸಗಾರನ್ನು ನೇಮಿಸಿಕೊಳ್ಳವಾಗ ಅಭ್ಯರ್ಥಿಯ ಮನೋಭಾವನೆಯನ್ನು ನೋಡಿಕೊಂಡು ಆಯ್ಕೆ ಮಾಡಿಕೊಳ್ಳಿ. ಹಂತ ಹಂತವಾಗಿ ಬಂಡವಾಳವನ್ನು ತೊಡಗಿಸಿಕೊಂಡು ಮುಂದುವರೆಯರಿ. ಉದ್ಯಮಶೀಲರಾಗಬೇಕಾದರೆ ಕೇವಲ ಜ್ಞಾನ ಅಥವಾ ಐದಿಯಾ ಇದ್ದರೆ ಸಾಲದು ಅದನ್ನು ಕಾರ್ಯರೂಪಕ್ಕೆ ತರುವ ಜಾಣ್ಮೆ ಇರಬೇಕು. ಉದ್ಯಮದ ಮೊದಲ ಗ್ರಾಹಕರನ್ನು ಯಾವುತ್ತೂ ಮರೆಯಬೇಡಿ ಯಾಕೆಂದರೆ ಅವರು ನಿಮ್ಮ ಮೇಲೆ ಮೊದಲು ನಂಬಿಕೆ ಇಟ್ಟಿವರು ಎಂದು ನಿಡ್ಲೆ ಅಗ್ರಿಲೀಫ್ ಎಕ್ಸಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೆಜಿಂಗ್ ಡೈರೆಕ್ಟರ್ ಅವಿನಾಶ್ ರಾವ್ ಅಭಿಪ್ರಾಯಪಟ್ಟರು.

ಅವರು ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಅಶೋಕ ಕುಮಾರ್ ಮಾತನಾಡಿ ಸ್ವ ಉದ್ಯೋಗಕ್ಕೆ ಬೇಕಾದ ಮಾಹಿತಿ ಮಾರ್ಗದರ್ಶನ ನೀಡಿದ ರುಡ್ ಸೆಟ್ ಸಂಸ್ಥೆಯ ಕಾರ್ಯವನ್ನು ಅಭಿನಂದಿಸಿ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಡಿ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನವನ್ನು ಸಹ ನೆನಪಿಸಿಕೊಂಡು.

ಕು. ಕೀರ್ತನಾ ಮತ್ತು ಕು. ಪ್ರತಿಷ್ಟಾ ಪ್ರಾರ್ಥಿಸಿದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಕೆ. ಕರುಣಾಕರ ಜೈನ್ ವಂದಿಸಿದರು. ಸುಮಾರು ೩೩ ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಸಮಿತಿಗಳ ವತಿಯಿಂದ ‘ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ ಪ್ರತಿಭಟನೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya
error: Content is protected !!