September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆಸಮಸ್ಯೆ

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

ಉಜಿರೆ: ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆಯು ಫೆ.24ರಂದು ಉಜಿರೆ ಟಿ.ಬಿ. ಕ್ರಾಸ್ ಜಂಕ್ಷನ್‌ನಲ್ಲಿ ನಡೆಯಿತು.

ಬ್ಲಾಕ್ ಸಮಿತಿ ಸದಸ್ಯ ಆರಿಫ್ ಮಾತನಾಡಿ ರಸ್ತೆ ಕಾಮಗಾರಿ ಕೆಲಸಗಳು ಬಹಳ ನಿಧನಗತಿಯಿಂದ ಸಾಗುತ್ತಿದೆ. ಮನವಿ ಕೊಟ್ಟಾಗ ಸ್ವಲ್ಪ ದಿನ ಕೆಲಸ ನಡೆಯುತ್ತದೆ. ಮತ್ತೆ ನಿಲ್ಲುತ್ತದೆ. ಆದಷ್ಟು ಬೇಗ ಕೆಲಸ ಮಾಡಬೇಕು. ಗುತ್ತಿಗೆದಾರನ್ನು ಬ್ಲಾಕ್ ಲಿಸ್ಟ್‌ಗೆ ಹಾಕಬೇಕು ಎಂದರು.

ಪಿಡಬ್ಲ್ಯೂ ಡಿ ಇಂಜಿನಿಯರ್ ಬಕ್ಕಪ್ಪ ರವರು ಮನವಿಯನ್ನು ಸ್ವೀಕರಿಸಿ, ಗುತ್ತಿಗೆದಾರರಿಗೆ ಪ್ರತಿಭಟನಾ ಸ್ಥಳದಲ್ಲೇ ಕರೆ ಮಾಡಿ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಆಲಿ, ಕುಂಟಿನಿ ಬ್ರಾಂಚ್ ಉಪಾಧ್ಯಕ್ಷ ರಫೀಕ್ ಕುಂಟಿನಿ, ಉಜಿರೆ ಬ್ಲಾಕ್ ಕಾರ್ಯದರ್ಶಿ ಮರ್ಷದ್ ಉಜಿರೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸದಸ್ಯ ಸಹಲ್ ನಿರ್ಸಾಲ್, ಪಂಚಾಯತ್ ಸದಸ್ಯ ಸಲೀಂ ಕುಂಟಿನಿ ಉಪಸ್ಥತರಿದ್ದರು.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya
error: Content is protected !!