24 C
ಪುತ್ತೂರು, ಬೆಳ್ತಂಗಡಿ
June 8, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

ಬೆಳ್ತಂಗಡಿ: ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ, ಮಹೂಂ ಶಾಝಿನ್ ಮುರ ಅವರ ಸ್ಮರಣಾರ್ಥವಾಗಿ, ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ (SSF) ಕರ್ನಾಟಕ ಬ್ಲಡ್ ಸೈಬೋ ಇದರ 330ನೇ ಮಹತ್ವದ ರಕ್ತದಾನ ಶಿಬಿರವನ್ನು ಫೆ.೨೩ರಂದು ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಆಯೋಜಿಸಲಾಯಿತು.

ಶಿಬಿರವನ್ನು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ನಡೆಸಲಾಯಿತು.

“SHARE LIFE, DONATE BLOOD” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾದ ಶಿಬಿರದಲ್ಲಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರು, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ನಾಯಕರುಗಳಾದ ನವಾಝ್ ಮಾವಿನಕಟ್ಟೆ, ಮುಬಿನ್ ಉಜಿರೆ, ಲತೀಫ್ ಅಹ್ಸನಿ ಮಲೆಬೆಟ್ಟು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಲೀಂ ಮುರ, ಎಸ್‌ವೈಎಸ್ ಬೆಳ್ತಂಗಡಿ ಸರ್ಕಲ್ ಅಧ್ಯಕ್ಷ ಝಮೀರ್ ಸಅದಿ ಲಾಯಿಲ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ನಾಯಕರುಗಳಾದ ಇಸಾಕ್ ಅಳದಂಗಡಿ, ನಾಸಿರ್ ಪಡ್ಡಂದಡ್ಕ, ಬಾತಿಷ್ ಮುಈನಿ, ಫಯಾಝ್ ಗೇರುಕಟ್ಟೆ, ಎಸ್‌ವೈಎಸ್ ಲಾಯಿಲ ಶಾಖೆಯ ಅಧ್ಯಕ್ಷ ರಫೀಕ್ ಲಾಯಿಲ ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷ ಬಾಸಿತ್ ಹಿಮಾಮಿ, ಉಪಾಧ್ಯಕ್ಷ ಇರ್ಷಾದ್ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಶಮೀರ್ ಲಾಯಿಲ, ಕ್ಯಾಬಿನೆಟ್ ಸದಸ್ಯರು ಹಾಗೂ SYS, KMJ, SJM, SMA ನಾಯಕರು, ತೇಜಸ್ವಿನಿ ಆಸ್ಪತ್ರೆಯ ಸಿಬ್ಬಂದಿ ವರ್ಗವು ಶಿಬಿರವನ್ನು ಯಶಸ್ವಿಗೊಳಿಸಲು ಶ್ರಮಿಸಿದರು. ಶಿಬಿರದಲ್ಲಿ ಅನೇಕ ಯುವಕರು, ಸಮಾಜ ಸೇವಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು.

ಎಸ್ಸೆಸ್ಸೆಫ್ ಕರ್ನಾಟಕ ಬ್ಲಡ್ ಸೈಬೋ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದು, ಇದುವರೆಗೆ ಹಲವಾರು ರೋಗಿಗಳಿಗೆ ರಕ್ತವನ್ನು ಪೂರೈಸುವಲ್ಲಿ ಯಶಸ್ಸು ಕಂಡಿದೆ.

Related posts

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya
error: Content is protected !!