September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

ಬೆಳ್ತಂಗಡಿ: ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ, ಮಹೂಂ ಶಾಝಿನ್ ಮುರ ಅವರ ಸ್ಮರಣಾರ್ಥವಾಗಿ, ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ (SSF) ಕರ್ನಾಟಕ ಬ್ಲಡ್ ಸೈಬೋ ಇದರ 330ನೇ ಮಹತ್ವದ ರಕ್ತದಾನ ಶಿಬಿರವನ್ನು ಫೆ.೨೩ರಂದು ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಆಯೋಜಿಸಲಾಯಿತು.

ಶಿಬಿರವನ್ನು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ನಡೆಸಲಾಯಿತು.

“SHARE LIFE, DONATE BLOOD” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾದ ಶಿಬಿರದಲ್ಲಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರು, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ನಾಯಕರುಗಳಾದ ನವಾಝ್ ಮಾವಿನಕಟ್ಟೆ, ಮುಬಿನ್ ಉಜಿರೆ, ಲತೀಫ್ ಅಹ್ಸನಿ ಮಲೆಬೆಟ್ಟು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಲೀಂ ಮುರ, ಎಸ್‌ವೈಎಸ್ ಬೆಳ್ತಂಗಡಿ ಸರ್ಕಲ್ ಅಧ್ಯಕ್ಷ ಝಮೀರ್ ಸಅದಿ ಲಾಯಿಲ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ನಾಯಕರುಗಳಾದ ಇಸಾಕ್ ಅಳದಂಗಡಿ, ನಾಸಿರ್ ಪಡ್ಡಂದಡ್ಕ, ಬಾತಿಷ್ ಮುಈನಿ, ಫಯಾಝ್ ಗೇರುಕಟ್ಟೆ, ಎಸ್‌ವೈಎಸ್ ಲಾಯಿಲ ಶಾಖೆಯ ಅಧ್ಯಕ್ಷ ರಫೀಕ್ ಲಾಯಿಲ ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷ ಬಾಸಿತ್ ಹಿಮಾಮಿ, ಉಪಾಧ್ಯಕ್ಷ ಇರ್ಷಾದ್ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಶಮೀರ್ ಲಾಯಿಲ, ಕ್ಯಾಬಿನೆಟ್ ಸದಸ್ಯರು ಹಾಗೂ SYS, KMJ, SJM, SMA ನಾಯಕರು, ತೇಜಸ್ವಿನಿ ಆಸ್ಪತ್ರೆಯ ಸಿಬ್ಬಂದಿ ವರ್ಗವು ಶಿಬಿರವನ್ನು ಯಶಸ್ವಿಗೊಳಿಸಲು ಶ್ರಮಿಸಿದರು. ಶಿಬಿರದಲ್ಲಿ ಅನೇಕ ಯುವಕರು, ಸಮಾಜ ಸೇವಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು.

ಎಸ್ಸೆಸ್ಸೆಫ್ ಕರ್ನಾಟಕ ಬ್ಲಡ್ ಸೈಬೋ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದು, ಇದುವರೆಗೆ ಹಲವಾರು ರೋಗಿಗಳಿಗೆ ರಕ್ತವನ್ನು ಪೂರೈಸುವಲ್ಲಿ ಯಶಸ್ಸು ಕಂಡಿದೆ.

Related posts

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!