24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಪಕ್ಷದ ಕಚೇರಿ ಉದ್ಘಾಟನೆಯ ಸಾರ್ವಜನಿಕ ಸಭೆ ಕಾರ್ಯಕ್ರಮ ರಹೀಮ್ ಬೀಟಿಗೆ ಅಧ್ಯಕ್ಷತೆಯಲ್ಲಿ ಕಕ್ಕಿಂಜೆಯಲ್ಲಿ ಫೆ.23ರಂದು ನಡೆಯಿತು.

ನೂತನ ಪಕ್ಷದ ಕಚೇರಿ ಉದ್ಘಾಟನೆಯನ್ನು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಭಾಗವಹಿಸಿದ್ದರು.

ರಾಜ್ಯ ಸಮಿತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಅಂಗಡಿ ಚಂದ್ರು ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ನವಾಝ್ ಕಟ್ಟೆ ಅವರನ್ನು ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಕ್ಕಿಂಜೆ ಮಸೀದಿ ಅಧ್ಯಕ್ಷರು ಇಸ್ಮಾಯಿಲ್ ಗೊಳಿದಡಿ, ಮಸೀದಿ ಕಾರ್ಯದರ್ಶಿಗಳಾದ ಇಬ್ರಾಹಿಂ ಬೊಂಟ್ರಪಾಲ್, ಚಾರ್ಮಾಡಿ ಮಸೀದಿ ಮಾಜಿ ಅಧ್ಯಕ್ಷರು ಫಾಳ್ಕನ್ ಮೋನು, ಎಸ್‌ಡಿಪಿಐ ಬೆಂಬಲಿತ ಚಾರ್ಮಾಡಿ ಪಂಚಾಯತ್ ಸದಸ್ಯರಾದ ಸಿದ್ದೀಕ್ ಹಾಗೂ ಆಯಿಷಾ, ಮಾಜಿ ಪಂಚಾಯತ್ ಸದಸ್ಯರು ಸಿ ಮೋನಕ, ಉಜಿರೆ ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಆಲಿ ಉಜಿರೆ ಹಾಗೂ ಊರಿನ ನಾಗರೀಕರು ಕಾರ್ಯಕರ್ತರು ಉಪಸ್ಥಿತರಿದ್ದರು.
ಅಶ್ರಫ್ ಚಾರ್ಮಾಡಿ ಅತಿಥಿಗಳನ್ನು ಸ್ವಾಗತಿಸಿ, ಸಹಲ್ ನಿರ್ಸಾಲ್ ವಂದಿಸಿದರು. ಮರ್ಷಾ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಸಿದರು.

Related posts

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya
error: Content is protected !!