23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

ಬೆಳ್ತಂಗಡಿ: ಲಾಯಿಲ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ, ಚರಂಡಿ, ಡಾಮರು ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಶಿತ್ ಶಿವರಾಮ್ ರವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಕ್ಶಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರಾಕ್ಟರ್, ಇಂಜಿನಿಯರ್, ಲೋಕೋಪಯೋಗಿ ಅಧಿಕಾರಿಗಳಿಗೆ ಕರೆ ಮಾಡಿ ಆದಷ್ಟು ಶೀಘ್ರವಾಗಿ ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯಂತೆ ಫೆ.24ರಿಂದ ರಸ್ತೆ ಕಾಮಗಾರಿಯ ಕೆಲಸ ಪ್ರಾರಂಭವಾಗಿದ್ದು, ಈ ಕಾಮಗಾರಿ ನಡೆಯಲು ಪ್ರಮುಖ ಕಾರಣಕರ್ತರಾದ ರಕ್ಷಿತ್ ಶಿವರಾಮ್ ಅವರಿಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ಹಾಗು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಯು ಕೆ ಹನೀಫ್,ಯೂಥ್ ಕಾಂಗ್ರೆಸ್ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹ್ಮಾನ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಮೊಹಮ್ಮದ್ ಕುಂಞಿ ಕತಾರ್, ಗ್ರಾಮ ಪಂಚಾಯತ್ ಸದಸ್ಯರಾದ ರೇವತಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶರೀಫ್ ಕುಂಟಿನಿ ಹಾಗೂ ಇಂಜಿನಿಯರ್ ಆಗಿರುವ ಎಸ್ ಬಿ ಹಮೀದ್, ಉಮರ್ ಕುಂಞಿ ನಾಡ್ಜೆ,ಉಸ್ಮಾನ್, ಉಬೈದ್,ಹಮೀದ್ ಇಕ್ಬಾಲ್ ಝಮೀರ್ ಹಾಗು ಇನ್ನಿತರ ಕಾಂಗ್ರೆಸ್ನ ಕಾರ್ಯಕರ್ತರು ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya
error: Content is protected !!