July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಗೇರುಕಟ್ಟೆ: ಲತೀಫ್ ಪರಿಮ, ಯೋಗಿಶ್ ಎಸ್.ಆರ್. ಹಾಗೂ ಸಾದಿಕ್ ಕೆಂಪಿ ರವರ ನೇತೃತ್ವದಲ್ಲಿ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭವು ಫೆ.23ರಂದು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ, ಲತೀಫ್ ಪರಿಮ, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ನೇವಿಲ್ ಮೊರಾಸ್, ನಿತೇಶ್ ಜಾರಿಗೆಬೈಲು, ಮನ್ಸೂರ್ ಜಿ, ಯೋಗಿಶ್ ಸುವರ್ಣ ಎಸ್.ಆರ್, ಹಬೀಬ್ ಕಜೆಮಾರ್, ರಫೀಕ್ ಪರಪ್ಪು, ಫಯಾಜ್ ಕೆ.ಎಂ., ಸಂದೀಪ್ ನಾಳ ಉಪಸ್ಥಿತರಿದ್ದರು.

ತೀರ್ಪುಗಾರರಾಗಿ ಶುಕೂರ್ ಕೆಂಪಿ ಉಪ್ಪಿನಂಗಡಿ ಹಾಗೂ ಯೋಗಿಶ್ ಎಸ್ ಆರ್. ಕಾರ್ಯ ನಿರ್ವಹಿಸಿದರು.

ಪ್ರಥಮ ಸ್ಥಾನವನ್ನು ಪ್ಲೇ ಬಾಯ್ಸ್ ಬೊಳ್ಳುಕಲ್ಲು, ದ್ವಿತೀಯ ಸ್ಥಾನವನ್ನು ವಿಫ್ನೇಶ್ ಪವರ್ ಸಿಸ್ಟಮ್ ನಾಳ, ತೃತೀಯ ಸ್ಥಾನವನ್ನು ಎಸ್.ಆರ್.ಹೆಚ್ ಗೇರುಕಟ್ಟೆ, ಚತುರ್ಥ ಸ್ಥಾನವನ್ನು ವೈ.ಎಫ್.ಓ ಓಡಿಲ್ನಾಳ ತಂಡ ಹಾಗೂ ಉತ್ತಮ ಶಿಸ್ತಿನ ತಂಡ ವೈ.ಎಫ್.ಓ ಓಡಿಲ್ನಾಳ ತಂಡ, ಸರಣಿ ಶ್ರೇಷ್ಠರಾಗಿ ಸಂದೀಪ್ ನಾಳ, ಪಂದ್ಯಶ್ರೇಷ್ಠರಾಗಿ ಸಾದಿಕ್ ಎರುಕಡಪ್ಪು, ಉತ್ತಮ ಬ್ಯಾಟ್ಸ್‌ಮನ್ ಆಗಿ ಅಮೀನ್ ಎರುಕಡಪ್ಪು, ಉತ್ತಮ ಬೌಲರ್ ಆಗಿ ರವಿ ನಾಳ, ಉತ್ತಮ ಫೀಲ್ಡರ್ ಆಗಿ ಸಂಶುದ್ದೀನ್ ಜಾರಿಗೆಬೈಲು, ಉತ್ತಮ ವಿಕೇಟ್ ಕೀಪರ್ ಆಗಿ ಶರೀಫ್ ಗೇರುಕಟ್ಟೆ, ಉದಯೋನ್ಮುಕ ಆಟಗಾರನಾಗಿ ಹಾಸಿಮ್ ಗೇರುಕಟ್ಟೆ ಪ್ರಶಸ್ತಿ ಸ್ವೀಕರಿಸಿದರು.

Related posts

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya
error: Content is protected !!