September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಗೇರುಕಟ್ಟೆ: ಲತೀಫ್ ಪರಿಮ, ಯೋಗಿಶ್ ಎಸ್.ಆರ್. ಹಾಗೂ ಸಾದಿಕ್ ಕೆಂಪಿ ರವರ ನೇತೃತ್ವದಲ್ಲಿ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭವು ಫೆ.23ರಂದು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ, ಲತೀಫ್ ಪರಿಮ, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ನೇವಿಲ್ ಮೊರಾಸ್, ನಿತೇಶ್ ಜಾರಿಗೆಬೈಲು, ಮನ್ಸೂರ್ ಜಿ, ಯೋಗಿಶ್ ಸುವರ್ಣ ಎಸ್.ಆರ್, ಹಬೀಬ್ ಕಜೆಮಾರ್, ರಫೀಕ್ ಪರಪ್ಪು, ಫಯಾಜ್ ಕೆ.ಎಂ., ಸಂದೀಪ್ ನಾಳ ಉಪಸ್ಥಿತರಿದ್ದರು.

ತೀರ್ಪುಗಾರರಾಗಿ ಶುಕೂರ್ ಕೆಂಪಿ ಉಪ್ಪಿನಂಗಡಿ ಹಾಗೂ ಯೋಗಿಶ್ ಎಸ್ ಆರ್. ಕಾರ್ಯ ನಿರ್ವಹಿಸಿದರು.

ಪ್ರಥಮ ಸ್ಥಾನವನ್ನು ಪ್ಲೇ ಬಾಯ್ಸ್ ಬೊಳ್ಳುಕಲ್ಲು, ದ್ವಿತೀಯ ಸ್ಥಾನವನ್ನು ವಿಫ್ನೇಶ್ ಪವರ್ ಸಿಸ್ಟಮ್ ನಾಳ, ತೃತೀಯ ಸ್ಥಾನವನ್ನು ಎಸ್.ಆರ್.ಹೆಚ್ ಗೇರುಕಟ್ಟೆ, ಚತುರ್ಥ ಸ್ಥಾನವನ್ನು ವೈ.ಎಫ್.ಓ ಓಡಿಲ್ನಾಳ ತಂಡ ಹಾಗೂ ಉತ್ತಮ ಶಿಸ್ತಿನ ತಂಡ ವೈ.ಎಫ್.ಓ ಓಡಿಲ್ನಾಳ ತಂಡ, ಸರಣಿ ಶ್ರೇಷ್ಠರಾಗಿ ಸಂದೀಪ್ ನಾಳ, ಪಂದ್ಯಶ್ರೇಷ್ಠರಾಗಿ ಸಾದಿಕ್ ಎರುಕಡಪ್ಪು, ಉತ್ತಮ ಬ್ಯಾಟ್ಸ್‌ಮನ್ ಆಗಿ ಅಮೀನ್ ಎರುಕಡಪ್ಪು, ಉತ್ತಮ ಬೌಲರ್ ಆಗಿ ರವಿ ನಾಳ, ಉತ್ತಮ ಫೀಲ್ಡರ್ ಆಗಿ ಸಂಶುದ್ದೀನ್ ಜಾರಿಗೆಬೈಲು, ಉತ್ತಮ ವಿಕೇಟ್ ಕೀಪರ್ ಆಗಿ ಶರೀಫ್ ಗೇರುಕಟ್ಟೆ, ಉದಯೋನ್ಮುಕ ಆಟಗಾರನಾಗಿ ಹಾಸಿಮ್ ಗೇರುಕಟ್ಟೆ ಪ್ರಶಸ್ತಿ ಸ್ವೀಕರಿಸಿದರು.

Related posts

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya
error: Content is protected !!