23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವು ಫೆ.೨೧ ಹಾಗೂ ೨೨ರಂದು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸುವ ಈ ಕೂಟವು ಉತ್ಸಾಹಭರಿತ ಸ್ಪರ್ಧೆಗಳು ಮತ್ತು ಉತ್ಸಾಹಭರಿತ ಪ್ರೇಕ್ಷಕರೊಂದಿಗೆ ಸಡಗರಪೂರ್ಣವಾಗಿ ಮುಕ್ತಾಯಗೊಂಡಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಖ್ಯಾತ ದಂತ ವೈದ್ಯ ಡಾ| ಸೂರಜ್ ಉಜಿರೆ ನೆರವೇರಿಸಿ ಮಾತನಾಡಿ ಅವರು ಕ್ರೀಡೆ ಮತ್ತು ಆರೋಗ್ಯದ ಮಹತ್ವವನ್ನು ವಿವರಿಸುತ್ತಾ, “ಕಲಿಕೆಯು ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲ, ಕ್ರೀಡೆಯೂ ಕಲಿಕೆಯ ಒಂದು ಅವಿಭಾಜ್ಯ ಅಂಗವಾಗಿದೆ. ಕ್ರೀಡೆಯು ಕೇವಲ ಸ್ಪರ್ಧೆಗಳಿಗಾಗಿ ಮಾತ್ರವಲ್ಲ, ಅವು ಶಿಸ್ತು, ಒಗ್ಗಟ್ಟನ್ನು ಬೆಳೆಸುತ್ತವೆ” ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ| ಎಂ. ಮಲ್ಲಿಕಾರ್ಜುನ ಗೌಡ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು ತಿಳಿಸಿದರು.

ಪ್ರಸನ್ನ ಸಿ.ಬಿ.ಎಸ್.ಸಿ ಶಾಲಾ ಮುಖ್ಯೋಪಾಧ್ಯಾಯ ಕೆ.ಎಸ್.ಎನ್ ಭಟ್ ಹಾಗೂ ಪ್ರಸನ್ನ ಕೈಗಾರಿಕಾ ತರಬೇತಿ ವಿದ್ಯಾಲಯದ ಪ್ರಾಂಶುಪಾಲ ಅಖಿಲೇಶ್ ಕುಮಾರ್ ರವರು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಪ್ರಾಧ್ಯಾಪಕಿ ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಕ್ರೀಡಾಕೂಟದ ಎರಡೂ ದಿನಗಳೂ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ಆಯೋಜಿಸಲಾಗಿತ್ತು.

Related posts

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!