April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರಧಾನ ಕಾರ್ಯಕ್ರಮವು ಫೆ.22ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೊ ವಹಿಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಪ್ರಾಂಶುಪಾಲ ಫಾ| ವಿಜಯ್ ಲೋಬೊ ಮಾತನಾಡಿ ವಿದ್ಯಾರ್ಥಿಗಳು ಸಮಾಜದ ದೀಪಗಳಾಗಿ ಬೆಳಗುವಂತೆ ಕರೆಯಿತ್ತರು.

ವಿದ್ಯಾರ್ಥಿಗಳು ಜಗತ್ತಿನ ಬೆಳಕಾಗುವಂತೆ ದೀಪ ಪ್ರಧಾನ ಮಾಡಲಾಯಿತು. 9ನೇ ತರಗತಿಯ ವಿದ್ಯಾರ್ಥಿ ಫಾತಿಮತ್ ಶಿಯಾ ಎಲ್ಲಾ ಕಿರಿಯ ವಿದ್ಯಾರ್ಥಿಗಳ ಪರವಾಗಿ ಶುಭ ಹಾರೈಸಿದರು.

ಕಿರಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮನೋರಂಜನಾ ಕ್ರೀಡೆಗಳನ್ನು ನಡೆಸಿಕೊಟ್ಟರು. ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಂಸ್ಥೆಗೆ 10ನೇ ತರಗತಿಯ ವಿದ್ಯಾರ್ಥಿಗಳು ಜೆರಾಕ್ಸ್ ಯಂತ್ರವನ್ನು ಕಾಣಿಕೆಯಾಗಿ ನೀಡಿದರು. ಕು. ಶ್ರಾವನ್ಯ ಮತ್ತು ಜೆವಿಟಾ

ಕಾರ್ಯಕ್ರಮ ನಿರೂಪಿಸಿದರು. ರೋಸಾ ಜೋಯ್ ಸ್ವಾಗತಿಸಿ, ಇಶ್ಮಾ ಫಾತಿಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅನುದೀಪ ೨೦೨೪-೨೫ರ ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು.

Related posts

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ