22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರಧಾನ ಕಾರ್ಯಕ್ರಮವು ಫೆ.22ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೊ ವಹಿಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಪ್ರಾಂಶುಪಾಲ ಫಾ| ವಿಜಯ್ ಲೋಬೊ ಮಾತನಾಡಿ ವಿದ್ಯಾರ್ಥಿಗಳು ಸಮಾಜದ ದೀಪಗಳಾಗಿ ಬೆಳಗುವಂತೆ ಕರೆಯಿತ್ತರು.

ವಿದ್ಯಾರ್ಥಿಗಳು ಜಗತ್ತಿನ ಬೆಳಕಾಗುವಂತೆ ದೀಪ ಪ್ರಧಾನ ಮಾಡಲಾಯಿತು. 9ನೇ ತರಗತಿಯ ವಿದ್ಯಾರ್ಥಿ ಫಾತಿಮತ್ ಶಿಯಾ ಎಲ್ಲಾ ಕಿರಿಯ ವಿದ್ಯಾರ್ಥಿಗಳ ಪರವಾಗಿ ಶುಭ ಹಾರೈಸಿದರು.

ಕಿರಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮನೋರಂಜನಾ ಕ್ರೀಡೆಗಳನ್ನು ನಡೆಸಿಕೊಟ್ಟರು. ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಂಸ್ಥೆಗೆ 10ನೇ ತರಗತಿಯ ವಿದ್ಯಾರ್ಥಿಗಳು ಜೆರಾಕ್ಸ್ ಯಂತ್ರವನ್ನು ಕಾಣಿಕೆಯಾಗಿ ನೀಡಿದರು. ಕು. ಶ್ರಾವನ್ಯ ಮತ್ತು ಜೆವಿಟಾ

ಕಾರ್ಯಕ್ರಮ ನಿರೂಪಿಸಿದರು. ರೋಸಾ ಜೋಯ್ ಸ್ವಾಗತಿಸಿ, ಇಶ್ಮಾ ಫಾತಿಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅನುದೀಪ ೨೦೨೪-೨೫ರ ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು.

Related posts

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya
error: Content is protected !!