September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ)ನಲ್ಲಿ ಮಾನವೀಯತೆ ವಿಭಾಗ ಸಂಘಟಿಸಿದ “ಕಲರವ” ಕಲೆಯ ಸೌಂದರ್ಯವನ್ನು ಆಚರಿಸುವ- 2025ರ ಒಂದು ದಿನದ ಇಂಟರ್ ಕಾಲೇಜಿಯೇಟ್ ಮತ್ತು ಇಂಟರ್ ಕ್ಲಾಸ್ ಫೆಸ್ಟ್ ಕಾರ್ಯಕ್ರಮ ಉದ್ಘಾಟನೆಯು ಫೆ.24ರಂದು ಉಜಿರೆ ಇಂದ್ರಪ್ರಸ್ಥ ಅಡಿಟೋರಿಯಂನಲ್ಲಿ ನಡೆಯಿತು.

ಮೂಡಬಿದ್ರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಮಂಗಳೂರು ಫಾರ್ಚೂನ್ ಪ್ರಮೋಟರ್ಸ್ ಪಾಲುದಾರರು, ಪವರ್ ಪಾಯಿಂಟ್ ಬ್ಯಾಟರಿ ಎಂ. ಡಿ. ಮಹೇಂದ್ರ ವರ್ಮಾ ಜೈನ್, ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ, ಕಲಾ ವಿಭಾಗದ ಭಾಸ್ಕರ್ ಹೆಗ್ಡೆ, ಸಂಸ್ಕೃತ ವಿಭಾಗದ ಶ್ರೀಧರ್ ಭಟ್, ವಿದ್ಯಾರ್ಥಿ ಪ್ರತಿನಿಧಿಗಳಾದ ವೀಕ್ಷ ಹಾಗೂ ಅಮೀರ್ ಉಪಸ್ಥಿತರಿದ್ದರು.

ಕಲರವ-2025ರ ಸಂಘಟನಾ ಕಾರ್ಯದರ್ಶಿ ಡಾ. ಸನ್ಮತಿ ಕುಮಾರ್ ಸ್ವಾಗತಿಸಿದರು. ಸುದೀಕ್ಷಾ ಮತ್ತು ತಂಡ ಪ್ರಾರ್ಥಿಸಿದರು. ವೀಕ್ಷ ಎಸ್.ವಿ. ವಂದಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya
error: Content is protected !!