22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

ಉಜಿರೆ: ನೀವು ಉದ್ಯಮಶೀಲರಾಬೇಕಾದರೆ ಸಂವಹನ ಕೌಶಲ್ಯ ಇರಬೇಕು, ಒಬ್ಬ ಉದ್ಯಮಿ ಉದ್ಯಮದ ಲಾಭ-ನಷ್ಟಗಳನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಇರಬೇಕು. ನೀವು ಆರಂಭಿಸುವ ಉದ್ಯಮಕ್ಕೆ ಒಂದು ಸರಿಯಾದ ದೃಷ್ಟಿಕೋನ ಇರಬೇಕು. ಪ್ರಾಮಾಣಿಕತೆ ಇರಬೇಕು. ನಿಮ್ಮ ಸ್ವಷ್ಟವಾದ ಗುರಿ, ಉದ್ದೇಶ ಇದ್ದು, ನೀವು ಪ್ರಾಮಾಣಿಕರಾಗಿದ್ದರೆ ನಿಮಗೆ ಬೇರೆ ಬೇರೆ ಮೂಲಗಳಿಂದ ಹಣಕಾಸು ನೆರವು ಬರುತ್ತದೆ. ಇದರ ಜೊತೆಗೆ ಹಣಕಾಸಿನ ನಿರ್ವಹಣೆ ಅಂದರೆ ಸರಿಯಾದ ಲೆಕ್ಕಚಾರ ನೀವು ಇಟ್ಟುಕೊಳ್ಳಬೇಕು. ಇನ್ನು ಉದ್ಯಮಕ್ಕೆ ಬೇಕಾಗುವ ಕೆಲಸಗಾರನ್ನು ನೇಮಿಸಿಕೊಳ್ಳವಾಗ ಅಭ್ಯರ್ಥಿಯ ಮನೋಭಾವನೆಯನ್ನು ನೋಡಿಕೊಂಡು ಆಯ್ಕೆ ಮಾಡಿಕೊಳ್ಳಿ. ಹಂತ ಹಂತವಾಗಿ ಬಂಡವಾಳವನ್ನು ತೊಡಗಿಸಿಕೊಂಡು ಮುಂದುವರೆಯರಿ. ಉದ್ಯಮಶೀಲರಾಗಬೇಕಾದರೆ ಕೇವಲ ಜ್ಞಾನ ಅಥವಾ ಐದಿಯಾ ಇದ್ದರೆ ಸಾಲದು ಅದನ್ನು ಕಾರ್ಯರೂಪಕ್ಕೆ ತರುವ ಜಾಣ್ಮೆ ಇರಬೇಕು. ಉದ್ಯಮದ ಮೊದಲ ಗ್ರಾಹಕರನ್ನು ಯಾವುತ್ತೂ ಮರೆಯಬೇಡಿ ಯಾಕೆಂದರೆ ಅವರು ನಿಮ್ಮ ಮೇಲೆ ಮೊದಲು ನಂಬಿಕೆ ಇಟ್ಟಿವರು ಎಂದು ನಿಡ್ಲೆ ಅಗ್ರಿಲೀಫ್ ಎಕ್ಸಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೆಜಿಂಗ್ ಡೈರೆಕ್ಟರ್ ಅವಿನಾಶ್ ರಾವ್ ಅಭಿಪ್ರಾಯಪಟ್ಟರು.

ಅವರು ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಅಶೋಕ ಕುಮಾರ್ ಮಾತನಾಡಿ ಸ್ವ ಉದ್ಯೋಗಕ್ಕೆ ಬೇಕಾದ ಮಾಹಿತಿ ಮಾರ್ಗದರ್ಶನ ನೀಡಿದ ರುಡ್ ಸೆಟ್ ಸಂಸ್ಥೆಯ ಕಾರ್ಯವನ್ನು ಅಭಿನಂದಿಸಿ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಡಿ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನವನ್ನು ಸಹ ನೆನಪಿಸಿಕೊಂಡು.

ಕು. ಕೀರ್ತನಾ ಮತ್ತು ಕು. ಪ್ರತಿಷ್ಟಾ ಪ್ರಾರ್ಥಿಸಿದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಕೆ. ಕರುಣಾಕರ ಜೈನ್ ವಂದಿಸಿದರು. ಸುಮಾರು ೩೩ ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು.

Related posts

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya
error: Content is protected !!