37.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆಸಮಸ್ಯೆ

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

ಉಜಿರೆ: ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆಯು ಫೆ.24ರಂದು ಉಜಿರೆ ಟಿ.ಬಿ. ಕ್ರಾಸ್ ಜಂಕ್ಷನ್‌ನಲ್ಲಿ ನಡೆಯಿತು.

ಬ್ಲಾಕ್ ಸಮಿತಿ ಸದಸ್ಯ ಆರಿಫ್ ಮಾತನಾಡಿ ರಸ್ತೆ ಕಾಮಗಾರಿ ಕೆಲಸಗಳು ಬಹಳ ನಿಧನಗತಿಯಿಂದ ಸಾಗುತ್ತಿದೆ. ಮನವಿ ಕೊಟ್ಟಾಗ ಸ್ವಲ್ಪ ದಿನ ಕೆಲಸ ನಡೆಯುತ್ತದೆ. ಮತ್ತೆ ನಿಲ್ಲುತ್ತದೆ. ಆದಷ್ಟು ಬೇಗ ಕೆಲಸ ಮಾಡಬೇಕು. ಗುತ್ತಿಗೆದಾರನ್ನು ಬ್ಲಾಕ್ ಲಿಸ್ಟ್‌ಗೆ ಹಾಕಬೇಕು ಎಂದರು.

ಪಿಡಬ್ಲ್ಯೂ ಡಿ ಇಂಜಿನಿಯರ್ ಬಕ್ಕಪ್ಪ ರವರು ಮನವಿಯನ್ನು ಸ್ವೀಕರಿಸಿ, ಗುತ್ತಿಗೆದಾರರಿಗೆ ಪ್ರತಿಭಟನಾ ಸ್ಥಳದಲ್ಲೇ ಕರೆ ಮಾಡಿ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಆಲಿ, ಕುಂಟಿನಿ ಬ್ರಾಂಚ್ ಉಪಾಧ್ಯಕ್ಷ ರಫೀಕ್ ಕುಂಟಿನಿ, ಉಜಿರೆ ಬ್ಲಾಕ್ ಕಾರ್ಯದರ್ಶಿ ಮರ್ಷದ್ ಉಜಿರೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸದಸ್ಯ ಸಹಲ್ ನಿರ್ಸಾಲ್, ಪಂಚಾಯತ್ ಸದಸ್ಯ ಸಲೀಂ ಕುಂಟಿನಿ ಉಪಸ್ಥತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya
error: Content is protected !!