30 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

ಬೆಳ್ತಂಗಡಿ: ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ, ಮಹೂಂ ಶಾಝಿನ್ ಮುರ ಅವರ ಸ್ಮರಣಾರ್ಥವಾಗಿ, ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ (SSF) ಕರ್ನಾಟಕ ಬ್ಲಡ್ ಸೈಬೋ ಇದರ 330ನೇ ಮಹತ್ವದ ರಕ್ತದಾನ ಶಿಬಿರವನ್ನು ಫೆ.೨೩ರಂದು ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಆಯೋಜಿಸಲಾಯಿತು.

ಶಿಬಿರವನ್ನು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ನಡೆಸಲಾಯಿತು.

“SHARE LIFE, DONATE BLOOD” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾದ ಶಿಬಿರದಲ್ಲಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರು, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ನಾಯಕರುಗಳಾದ ನವಾಝ್ ಮಾವಿನಕಟ್ಟೆ, ಮುಬಿನ್ ಉಜಿರೆ, ಲತೀಫ್ ಅಹ್ಸನಿ ಮಲೆಬೆಟ್ಟು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಲೀಂ ಮುರ, ಎಸ್‌ವೈಎಸ್ ಬೆಳ್ತಂಗಡಿ ಸರ್ಕಲ್ ಅಧ್ಯಕ್ಷ ಝಮೀರ್ ಸಅದಿ ಲಾಯಿಲ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ನಾಯಕರುಗಳಾದ ಇಸಾಕ್ ಅಳದಂಗಡಿ, ನಾಸಿರ್ ಪಡ್ಡಂದಡ್ಕ, ಬಾತಿಷ್ ಮುಈನಿ, ಫಯಾಝ್ ಗೇರುಕಟ್ಟೆ, ಎಸ್‌ವೈಎಸ್ ಲಾಯಿಲ ಶಾಖೆಯ ಅಧ್ಯಕ್ಷ ರಫೀಕ್ ಲಾಯಿಲ ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷ ಬಾಸಿತ್ ಹಿಮಾಮಿ, ಉಪಾಧ್ಯಕ್ಷ ಇರ್ಷಾದ್ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಶಮೀರ್ ಲಾಯಿಲ, ಕ್ಯಾಬಿನೆಟ್ ಸದಸ್ಯರು ಹಾಗೂ SYS, KMJ, SJM, SMA ನಾಯಕರು, ತೇಜಸ್ವಿನಿ ಆಸ್ಪತ್ರೆಯ ಸಿಬ್ಬಂದಿ ವರ್ಗವು ಶಿಬಿರವನ್ನು ಯಶಸ್ವಿಗೊಳಿಸಲು ಶ್ರಮಿಸಿದರು. ಶಿಬಿರದಲ್ಲಿ ಅನೇಕ ಯುವಕರು, ಸಮಾಜ ಸೇವಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು.

ಎಸ್ಸೆಸ್ಸೆಫ್ ಕರ್ನಾಟಕ ಬ್ಲಡ್ ಸೈಬೋ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದು, ಇದುವರೆಗೆ ಹಲವಾರು ರೋಗಿಗಳಿಗೆ ರಕ್ತವನ್ನು ಪೂರೈಸುವಲ್ಲಿ ಯಶಸ್ಸು ಕಂಡಿದೆ.

Related posts

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!