30.2 C
ಪುತ್ತೂರು, ಬೆಳ್ತಂಗಡಿ
June 7, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

ಬೆಳ್ತಂಗಡಿ: ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ, ಮಹೂಂ ಶಾಝಿನ್ ಮುರ ಅವರ ಸ್ಮರಣಾರ್ಥವಾಗಿ, ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ (SSF) ಕರ್ನಾಟಕ ಬ್ಲಡ್ ಸೈಬೋ ಇದರ 330ನೇ ಮಹತ್ವದ ರಕ್ತದಾನ ಶಿಬಿರವನ್ನು ಫೆ.೨೩ರಂದು ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಆಯೋಜಿಸಲಾಯಿತು.

ಶಿಬಿರವನ್ನು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ನಡೆಸಲಾಯಿತು.

“SHARE LIFE, DONATE BLOOD” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾದ ಶಿಬಿರದಲ್ಲಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರು, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ನಾಯಕರುಗಳಾದ ನವಾಝ್ ಮಾವಿನಕಟ್ಟೆ, ಮುಬಿನ್ ಉಜಿರೆ, ಲತೀಫ್ ಅಹ್ಸನಿ ಮಲೆಬೆಟ್ಟು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಲೀಂ ಮುರ, ಎಸ್‌ವೈಎಸ್ ಬೆಳ್ತಂಗಡಿ ಸರ್ಕಲ್ ಅಧ್ಯಕ್ಷ ಝಮೀರ್ ಸಅದಿ ಲಾಯಿಲ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ನಾಯಕರುಗಳಾದ ಇಸಾಕ್ ಅಳದಂಗಡಿ, ನಾಸಿರ್ ಪಡ್ಡಂದಡ್ಕ, ಬಾತಿಷ್ ಮುಈನಿ, ಫಯಾಝ್ ಗೇರುಕಟ್ಟೆ, ಎಸ್‌ವೈಎಸ್ ಲಾಯಿಲ ಶಾಖೆಯ ಅಧ್ಯಕ್ಷ ರಫೀಕ್ ಲಾಯಿಲ ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷ ಬಾಸಿತ್ ಹಿಮಾಮಿ, ಉಪಾಧ್ಯಕ್ಷ ಇರ್ಷಾದ್ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಶಮೀರ್ ಲಾಯಿಲ, ಕ್ಯಾಬಿನೆಟ್ ಸದಸ್ಯರು ಹಾಗೂ SYS, KMJ, SJM, SMA ನಾಯಕರು, ತೇಜಸ್ವಿನಿ ಆಸ್ಪತ್ರೆಯ ಸಿಬ್ಬಂದಿ ವರ್ಗವು ಶಿಬಿರವನ್ನು ಯಶಸ್ವಿಗೊಳಿಸಲು ಶ್ರಮಿಸಿದರು. ಶಿಬಿರದಲ್ಲಿ ಅನೇಕ ಯುವಕರು, ಸಮಾಜ ಸೇವಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು.

ಎಸ್ಸೆಸ್ಸೆಫ್ ಕರ್ನಾಟಕ ಬ್ಲಡ್ ಸೈಬೋ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದು, ಇದುವರೆಗೆ ಹಲವಾರು ರೋಗಿಗಳಿಗೆ ರಕ್ತವನ್ನು ಪೂರೈಸುವಲ್ಲಿ ಯಶಸ್ಸು ಕಂಡಿದೆ.

Related posts

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya
error: Content is protected !!