22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

ಬೆಳ್ತಂಗಡಿ: ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ, ಮಹೂಂ ಶಾಝಿನ್ ಮುರ ಅವರ ಸ್ಮರಣಾರ್ಥವಾಗಿ, ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ (SSF) ಕರ್ನಾಟಕ ಬ್ಲಡ್ ಸೈಬೋ ಇದರ 330ನೇ ಮಹತ್ವದ ರಕ್ತದಾನ ಶಿಬಿರವನ್ನು ಫೆ.೨೩ರಂದು ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಆಯೋಜಿಸಲಾಯಿತು.

ಶಿಬಿರವನ್ನು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ನಡೆಸಲಾಯಿತು.

“SHARE LIFE, DONATE BLOOD” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾದ ಶಿಬಿರದಲ್ಲಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರು, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ನಾಯಕರುಗಳಾದ ನವಾಝ್ ಮಾವಿನಕಟ್ಟೆ, ಮುಬಿನ್ ಉಜಿರೆ, ಲತೀಫ್ ಅಹ್ಸನಿ ಮಲೆಬೆಟ್ಟು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಲೀಂ ಮುರ, ಎಸ್‌ವೈಎಸ್ ಬೆಳ್ತಂಗಡಿ ಸರ್ಕಲ್ ಅಧ್ಯಕ್ಷ ಝಮೀರ್ ಸಅದಿ ಲಾಯಿಲ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ನಾಯಕರುಗಳಾದ ಇಸಾಕ್ ಅಳದಂಗಡಿ, ನಾಸಿರ್ ಪಡ್ಡಂದಡ್ಕ, ಬಾತಿಷ್ ಮುಈನಿ, ಫಯಾಝ್ ಗೇರುಕಟ್ಟೆ, ಎಸ್‌ವೈಎಸ್ ಲಾಯಿಲ ಶಾಖೆಯ ಅಧ್ಯಕ್ಷ ರಫೀಕ್ ಲಾಯಿಲ ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷ ಬಾಸಿತ್ ಹಿಮಾಮಿ, ಉಪಾಧ್ಯಕ್ಷ ಇರ್ಷಾದ್ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಶಮೀರ್ ಲಾಯಿಲ, ಕ್ಯಾಬಿನೆಟ್ ಸದಸ್ಯರು ಹಾಗೂ SYS, KMJ, SJM, SMA ನಾಯಕರು, ತೇಜಸ್ವಿನಿ ಆಸ್ಪತ್ರೆಯ ಸಿಬ್ಬಂದಿ ವರ್ಗವು ಶಿಬಿರವನ್ನು ಯಶಸ್ವಿಗೊಳಿಸಲು ಶ್ರಮಿಸಿದರು. ಶಿಬಿರದಲ್ಲಿ ಅನೇಕ ಯುವಕರು, ಸಮಾಜ ಸೇವಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು.

ಎಸ್ಸೆಸ್ಸೆಫ್ ಕರ್ನಾಟಕ ಬ್ಲಡ್ ಸೈಬೋ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದು, ಇದುವರೆಗೆ ಹಲವಾರು ರೋಗಿಗಳಿಗೆ ರಕ್ತವನ್ನು ಪೂರೈಸುವಲ್ಲಿ ಯಶಸ್ಸು ಕಂಡಿದೆ.

Related posts

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya
error: Content is protected !!