24 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

ಬೆಳ್ತಂಗಡಿ: ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ, ಮಹೂಂ ಶಾಝಿನ್ ಮುರ ಅವರ ಸ್ಮರಣಾರ್ಥವಾಗಿ, ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ (SSF) ಕರ್ನಾಟಕ ಬ್ಲಡ್ ಸೈಬೋ ಇದರ 330ನೇ ಮಹತ್ವದ ರಕ್ತದಾನ ಶಿಬಿರವನ್ನು ಫೆ.೨೩ರಂದು ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಆಯೋಜಿಸಲಾಯಿತು.

ಶಿಬಿರವನ್ನು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ನಡೆಸಲಾಯಿತು.

“SHARE LIFE, DONATE BLOOD” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾದ ಶಿಬಿರದಲ್ಲಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರು, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ನಾಯಕರುಗಳಾದ ನವಾಝ್ ಮಾವಿನಕಟ್ಟೆ, ಮುಬಿನ್ ಉಜಿರೆ, ಲತೀಫ್ ಅಹ್ಸನಿ ಮಲೆಬೆಟ್ಟು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಲೀಂ ಮುರ, ಎಸ್‌ವೈಎಸ್ ಬೆಳ್ತಂಗಡಿ ಸರ್ಕಲ್ ಅಧ್ಯಕ್ಷ ಝಮೀರ್ ಸಅದಿ ಲಾಯಿಲ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ನಾಯಕರುಗಳಾದ ಇಸಾಕ್ ಅಳದಂಗಡಿ, ನಾಸಿರ್ ಪಡ್ಡಂದಡ್ಕ, ಬಾತಿಷ್ ಮುಈನಿ, ಫಯಾಝ್ ಗೇರುಕಟ್ಟೆ, ಎಸ್‌ವೈಎಸ್ ಲಾಯಿಲ ಶಾಖೆಯ ಅಧ್ಯಕ್ಷ ರಫೀಕ್ ಲಾಯಿಲ ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷ ಬಾಸಿತ್ ಹಿಮಾಮಿ, ಉಪಾಧ್ಯಕ್ಷ ಇರ್ಷಾದ್ ಕೊಯ್ಯೂರು, ಪ್ರಧಾನ ಕಾರ್ಯದರ್ಶಿ ಶಮೀರ್ ಲಾಯಿಲ, ಕ್ಯಾಬಿನೆಟ್ ಸದಸ್ಯರು ಹಾಗೂ SYS, KMJ, SJM, SMA ನಾಯಕರು, ತೇಜಸ್ವಿನಿ ಆಸ್ಪತ್ರೆಯ ಸಿಬ್ಬಂದಿ ವರ್ಗವು ಶಿಬಿರವನ್ನು ಯಶಸ್ವಿಗೊಳಿಸಲು ಶ್ರಮಿಸಿದರು. ಶಿಬಿರದಲ್ಲಿ ಅನೇಕ ಯುವಕರು, ಸಮಾಜ ಸೇವಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು.

ಎಸ್ಸೆಸ್ಸೆಫ್ ಕರ್ನಾಟಕ ಬ್ಲಡ್ ಸೈಬೋ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದು, ಇದುವರೆಗೆ ಹಲವಾರು ರೋಗಿಗಳಿಗೆ ರಕ್ತವನ್ನು ಪೂರೈಸುವಲ್ಲಿ ಯಶಸ್ಸು ಕಂಡಿದೆ.

Related posts

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya
error: Content is protected !!