September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಪಕ್ಷದ ಕಚೇರಿ ಉದ್ಘಾಟನೆಯ ಸಾರ್ವಜನಿಕ ಸಭೆ ಕಾರ್ಯಕ್ರಮ ರಹೀಮ್ ಬೀಟಿಗೆ ಅಧ್ಯಕ್ಷತೆಯಲ್ಲಿ ಕಕ್ಕಿಂಜೆಯಲ್ಲಿ ಫೆ.23ರಂದು ನಡೆಯಿತು.

ನೂತನ ಪಕ್ಷದ ಕಚೇರಿ ಉದ್ಘಾಟನೆಯನ್ನು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಭಾಗವಹಿಸಿದ್ದರು.

ರಾಜ್ಯ ಸಮಿತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಅಂಗಡಿ ಚಂದ್ರು ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾದ ನವಾಝ್ ಕಟ್ಟೆ ಅವರನ್ನು ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಕ್ಕಿಂಜೆ ಮಸೀದಿ ಅಧ್ಯಕ್ಷರು ಇಸ್ಮಾಯಿಲ್ ಗೊಳಿದಡಿ, ಮಸೀದಿ ಕಾರ್ಯದರ್ಶಿಗಳಾದ ಇಬ್ರಾಹಿಂ ಬೊಂಟ್ರಪಾಲ್, ಚಾರ್ಮಾಡಿ ಮಸೀದಿ ಮಾಜಿ ಅಧ್ಯಕ್ಷರು ಫಾಳ್ಕನ್ ಮೋನು, ಎಸ್‌ಡಿಪಿಐ ಬೆಂಬಲಿತ ಚಾರ್ಮಾಡಿ ಪಂಚಾಯತ್ ಸದಸ್ಯರಾದ ಸಿದ್ದೀಕ್ ಹಾಗೂ ಆಯಿಷಾ, ಮಾಜಿ ಪಂಚಾಯತ್ ಸದಸ್ಯರು ಸಿ ಮೋನಕ, ಉಜಿರೆ ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಆಲಿ ಉಜಿರೆ ಹಾಗೂ ಊರಿನ ನಾಗರೀಕರು ಕಾರ್ಯಕರ್ತರು ಉಪಸ್ಥಿತರಿದ್ದರು.
ಅಶ್ರಫ್ ಚಾರ್ಮಾಡಿ ಅತಿಥಿಗಳನ್ನು ಸ್ವಾಗತಿಸಿ, ಸಹಲ್ ನಿರ್ಸಾಲ್ ವಂದಿಸಿದರು. ಮರ್ಷಾ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಸಿದರು.

Related posts

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya
error: Content is protected !!