37.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

ಬೆಳ್ತಂಗಡಿ: ಲಾಯಿಲ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ, ಚರಂಡಿ, ಡಾಮರು ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಶಿತ್ ಶಿವರಾಮ್ ರವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಕ್ಶಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರಾಕ್ಟರ್, ಇಂಜಿನಿಯರ್, ಲೋಕೋಪಯೋಗಿ ಅಧಿಕಾರಿಗಳಿಗೆ ಕರೆ ಮಾಡಿ ಆದಷ್ಟು ಶೀಘ್ರವಾಗಿ ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯಂತೆ ಫೆ.24ರಿಂದ ರಸ್ತೆ ಕಾಮಗಾರಿಯ ಕೆಲಸ ಪ್ರಾರಂಭವಾಗಿದ್ದು, ಈ ಕಾಮಗಾರಿ ನಡೆಯಲು ಪ್ರಮುಖ ಕಾರಣಕರ್ತರಾದ ರಕ್ಷಿತ್ ಶಿವರಾಮ್ ಅವರಿಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ಹಾಗು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಯು ಕೆ ಹನೀಫ್,ಯೂಥ್ ಕಾಂಗ್ರೆಸ್ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹ್ಮಾನ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಮೊಹಮ್ಮದ್ ಕುಂಞಿ ಕತಾರ್, ಗ್ರಾಮ ಪಂಚಾಯತ್ ಸದಸ್ಯರಾದ ರೇವತಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶರೀಫ್ ಕುಂಟಿನಿ ಹಾಗೂ ಇಂಜಿನಿಯರ್ ಆಗಿರುವ ಎಸ್ ಬಿ ಹಮೀದ್, ಉಮರ್ ಕುಂಞಿ ನಾಡ್ಜೆ,ಉಸ್ಮಾನ್, ಉಬೈದ್,ಹಮೀದ್ ಇಕ್ಬಾಲ್ ಝಮೀರ್ ಹಾಗು ಇನ್ನಿತರ ಕಾಂಗ್ರೆಸ್ನ ಕಾರ್ಯಕರ್ತರು ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!