23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

ಬೆಳ್ತಂಗಡಿ: ಲಾಯಿಲ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ, ಚರಂಡಿ, ಡಾಮರು ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಶಿತ್ ಶಿವರಾಮ್ ರವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಕ್ಶಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರಾಕ್ಟರ್, ಇಂಜಿನಿಯರ್, ಲೋಕೋಪಯೋಗಿ ಅಧಿಕಾರಿಗಳಿಗೆ ಕರೆ ಮಾಡಿ ಆದಷ್ಟು ಶೀಘ್ರವಾಗಿ ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯಂತೆ ಫೆ.24ರಿಂದ ರಸ್ತೆ ಕಾಮಗಾರಿಯ ಕೆಲಸ ಪ್ರಾರಂಭವಾಗಿದ್ದು, ಈ ಕಾಮಗಾರಿ ನಡೆಯಲು ಪ್ರಮುಖ ಕಾರಣಕರ್ತರಾದ ರಕ್ಷಿತ್ ಶಿವರಾಮ್ ಅವರಿಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ಹಾಗು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಯು ಕೆ ಹನೀಫ್,ಯೂಥ್ ಕಾಂಗ್ರೆಸ್ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹ್ಮಾನ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಮೊಹಮ್ಮದ್ ಕುಂಞಿ ಕತಾರ್, ಗ್ರಾಮ ಪಂಚಾಯತ್ ಸದಸ್ಯರಾದ ರೇವತಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶರೀಫ್ ಕುಂಟಿನಿ ಹಾಗೂ ಇಂಜಿನಿಯರ್ ಆಗಿರುವ ಎಸ್ ಬಿ ಹಮೀದ್, ಉಮರ್ ಕುಂಞಿ ನಾಡ್ಜೆ,ಉಸ್ಮಾನ್, ಉಬೈದ್,ಹಮೀದ್ ಇಕ್ಬಾಲ್ ಝಮೀರ್ ಹಾಗು ಇನ್ನಿತರ ಕಾಂಗ್ರೆಸ್ನ ಕಾರ್ಯಕರ್ತರು ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya
error: Content is protected !!