23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

ಬೆಳ್ತಂಗಡಿ: ಲಾಯಿಲ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ, ಚರಂಡಿ, ಡಾಮರು ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಶಿತ್ ಶಿವರಾಮ್ ರವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಕ್ಶಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರಾಕ್ಟರ್, ಇಂಜಿನಿಯರ್, ಲೋಕೋಪಯೋಗಿ ಅಧಿಕಾರಿಗಳಿಗೆ ಕರೆ ಮಾಡಿ ಆದಷ್ಟು ಶೀಘ್ರವಾಗಿ ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯಂತೆ ಫೆ.24ರಿಂದ ರಸ್ತೆ ಕಾಮಗಾರಿಯ ಕೆಲಸ ಪ್ರಾರಂಭವಾಗಿದ್ದು, ಈ ಕಾಮಗಾರಿ ನಡೆಯಲು ಪ್ರಮುಖ ಕಾರಣಕರ್ತರಾದ ರಕ್ಷಿತ್ ಶಿವರಾಮ್ ಅವರಿಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ಹಾಗು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಯು ಕೆ ಹನೀಫ್,ಯೂಥ್ ಕಾಂಗ್ರೆಸ್ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹ್ಮಾನ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಮೊಹಮ್ಮದ್ ಕುಂಞಿ ಕತಾರ್, ಗ್ರಾಮ ಪಂಚಾಯತ್ ಸದಸ್ಯರಾದ ರೇವತಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶರೀಫ್ ಕುಂಟಿನಿ ಹಾಗೂ ಇಂಜಿನಿಯರ್ ಆಗಿರುವ ಎಸ್ ಬಿ ಹಮೀದ್, ಉಮರ್ ಕುಂಞಿ ನಾಡ್ಜೆ,ಉಸ್ಮಾನ್, ಉಬೈದ್,ಹಮೀದ್ ಇಕ್ಬಾಲ್ ಝಮೀರ್ ಹಾಗು ಇನ್ನಿತರ ಕಾಂಗ್ರೆಸ್ನ ಕಾರ್ಯಕರ್ತರು ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya
error: Content is protected !!