22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

ಬೆಳ್ತಂಗಡಿ: ಲಾಯಿಲ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ, ಚರಂಡಿ, ಡಾಮರು ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಶಿತ್ ಶಿವರಾಮ್ ರವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಕ್ಶಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರಾಕ್ಟರ್, ಇಂಜಿನಿಯರ್, ಲೋಕೋಪಯೋಗಿ ಅಧಿಕಾರಿಗಳಿಗೆ ಕರೆ ಮಾಡಿ ಆದಷ್ಟು ಶೀಘ್ರವಾಗಿ ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯಂತೆ ಫೆ.24ರಿಂದ ರಸ್ತೆ ಕಾಮಗಾರಿಯ ಕೆಲಸ ಪ್ರಾರಂಭವಾಗಿದ್ದು, ಈ ಕಾಮಗಾರಿ ನಡೆಯಲು ಪ್ರಮುಖ ಕಾರಣಕರ್ತರಾದ ರಕ್ಷಿತ್ ಶಿವರಾಮ್ ಅವರಿಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ಹಾಗು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಯು ಕೆ ಹನೀಫ್,ಯೂಥ್ ಕಾಂಗ್ರೆಸ್ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹ್ಮಾನ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಮೊಹಮ್ಮದ್ ಕುಂಞಿ ಕತಾರ್, ಗ್ರಾಮ ಪಂಚಾಯತ್ ಸದಸ್ಯರಾದ ರೇವತಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶರೀಫ್ ಕುಂಟಿನಿ ಹಾಗೂ ಇಂಜಿನಿಯರ್ ಆಗಿರುವ ಎಸ್ ಬಿ ಹಮೀದ್, ಉಮರ್ ಕುಂಞಿ ನಾಡ್ಜೆ,ಉಸ್ಮಾನ್, ಉಬೈದ್,ಹಮೀದ್ ಇಕ್ಬಾಲ್ ಝಮೀರ್ ಹಾಗು ಇನ್ನಿತರ ಕಾಂಗ್ರೆಸ್ನ ಕಾರ್ಯಕರ್ತರು ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

‘ರಾಘು ಮಾಸ್ಟರ್’ ನಾಟಕ 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನ: ಶಿಶಿಲ ಶಾಲೆಯಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ತಂಡದವರಿಂದ ಸಂಭ್ರಮಾಚರಣೆ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya
error: Content is protected !!