23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

ಬೆಳ್ತಂಗಡಿ: ಸೇವಾಧಾಮ-ಸೇವಾಭಾರತಿ ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್, ರೋಟರಿ ಕ್ಲಬ್ ಶಿರಸಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಶಿರಸಿ ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೇ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಕರೆ ತರುವ ಉದ್ದೇಶದಿಂದ ಫೆ.೨೪ರಂದು ಜಾಥಾವನ್ನು ನಡೆಸಲಾಯಿತು. ಶಿರಸಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಗಪ್ಪ ಹಸಿರು ನಿಷಾನೆಯನ್ನು ಹಾರಿಸಿ ಜಾಥಾಕ್ಕೆ ಚಾಲನೆಯನ್ನು ನೀಡಿದರು.

ಮಾರಿಕಾಂಬ ದೇವಸ್ಥಾನದಿಂದ ಜಾಥಾವನ್ನು ಪ್ರಾರಂಭಿಸಿ ಹಳೆ ಬಸ್‌ಸ್ಟ್ಯಾಂಡ್ ಶಿರಸಿ ಮುಖಾಂತರ ಸಿಪಿ ಬಜಾರ್ ರೋಡ್ ನಿಂದ ಸರ್ಕಾರ್ ಹೋಟೆಲ್ ಮಾರ್ಗವಾಗಿ ದೇವಿಕೆರೆಯಿಂದ ಸಾಗಿ ಶಿರಸಿ ಸ್ಕ್ಯಾನ್ ಸೆಂಟರ್ ತನಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಒಟ್ಟು ೧೩ ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಮತ್ತು ಆರೈಕೆದಾರರು, ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಡಾ. ಸುಮನ್ ಹೆಗಡೆ, ಶಿರಸಿ ಸ್ಕ್ಯಾನ್ ಸೆಂಟರ್ ನಿರ್ದೇಶಕರು ರೊ| ಡಾ. ದಿನೇಶ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್‌ಮ್ಯಾನ್ ರೊ| ಮಹೇಶ್ ತೆಲಂಗ, ಶಿರಸಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ| ಸರಸ್ವತಿ ಎನ್ ರವಿ ಹಾಗೂ ರೋಟರಿ ಕ್ಲಬ್ ನ ಇನ್ನಿತರ ಸದಸ್ಯರು, ಶಿರಸಿ ರೋಟರಿ ಕ್ಲಬ್ ಖಜಾಂಚಿ ರೋ| ವಿನಾಯಕ್ ಜೋಶಿ, ಸ್ಕ್ಯಾನ್ ಸೆಂಟರ್‌ನ ಮಣಿಕಂಠ, ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿ ಸಿಬ್ಬಂದಿ ವರ್ಗದವರು, ಹಾಗೂ ವಿದ್ಯಾರ್ಥಿಗಳು ಸೇರಿದಂತೆ ೧೦೦ ಮಂದಿ ಜಾಥದಲ್ಲಿ ಭಾಗವಹಿಸಿದ್ದರು.

Related posts

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!