39.3 C
ಪುತ್ತೂರು, ಬೆಳ್ತಂಗಡಿ
February 24, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

ಬೆಳ್ತಂಗಡಿ: ಸೇವಾಧಾಮ-ಸೇವಾಭಾರತಿ ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್, ರೋಟರಿ ಕ್ಲಬ್ ಶಿರಸಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಶಿರಸಿ ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೇ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಕರೆ ತರುವ ಉದ್ದೇಶದಿಂದ ಫೆ.೨೪ರಂದು ಜಾಥಾವನ್ನು ನಡೆಸಲಾಯಿತು. ಶಿರಸಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಗಪ್ಪ ಹಸಿರು ನಿಷಾನೆಯನ್ನು ಹಾರಿಸಿ ಜಾಥಾಕ್ಕೆ ಚಾಲನೆಯನ್ನು ನೀಡಿದರು.

ಮಾರಿಕಾಂಬ ದೇವಸ್ಥಾನದಿಂದ ಜಾಥಾವನ್ನು ಪ್ರಾರಂಭಿಸಿ ಹಳೆ ಬಸ್‌ಸ್ಟ್ಯಾಂಡ್ ಶಿರಸಿ ಮುಖಾಂತರ ಸಿಪಿ ಬಜಾರ್ ರೋಡ್ ನಿಂದ ಸರ್ಕಾರ್ ಹೋಟೆಲ್ ಮಾರ್ಗವಾಗಿ ದೇವಿಕೆರೆಯಿಂದ ಸಾಗಿ ಶಿರಸಿ ಸ್ಕ್ಯಾನ್ ಸೆಂಟರ್ ತನಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಒಟ್ಟು ೧೩ ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಮತ್ತು ಆರೈಕೆದಾರರು, ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಡಾ. ಸುಮನ್ ಹೆಗಡೆ, ಶಿರಸಿ ಸ್ಕ್ಯಾನ್ ಸೆಂಟರ್ ನಿರ್ದೇಶಕರು ರೊ| ಡಾ. ದಿನೇಶ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್‌ಮ್ಯಾನ್ ರೊ| ಮಹೇಶ್ ತೆಲಂಗ, ಶಿರಸಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ| ಸರಸ್ವತಿ ಎನ್ ರವಿ ಹಾಗೂ ರೋಟರಿ ಕ್ಲಬ್ ನ ಇನ್ನಿತರ ಸದಸ್ಯರು, ಶಿರಸಿ ರೋಟರಿ ಕ್ಲಬ್ ಖಜಾಂಚಿ ರೋ| ವಿನಾಯಕ್ ಜೋಶಿ, ಸ್ಕ್ಯಾನ್ ಸೆಂಟರ್‌ನ ಮಣಿಕಂಠ, ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿ ಸಿಬ್ಬಂದಿ ವರ್ಗದವರು, ಹಾಗೂ ವಿದ್ಯಾರ್ಥಿಗಳು ಸೇರಿದಂತೆ ೧೦೦ ಮಂದಿ ಜಾಥದಲ್ಲಿ ಭಾಗವಹಿಸಿದ್ದರು.

Related posts

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya
error: Content is protected !!