22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

ಬೆಳ್ತಂಗಡಿ: ಸೇವಾಧಾಮ-ಸೇವಾಭಾರತಿ ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್, ರೋಟರಿ ಕ್ಲಬ್ ಶಿರಸಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಶಿರಸಿ ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೇ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಕರೆ ತರುವ ಉದ್ದೇಶದಿಂದ ಫೆ.೨೪ರಂದು ಜಾಥಾವನ್ನು ನಡೆಸಲಾಯಿತು. ಶಿರಸಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಗಪ್ಪ ಹಸಿರು ನಿಷಾನೆಯನ್ನು ಹಾರಿಸಿ ಜಾಥಾಕ್ಕೆ ಚಾಲನೆಯನ್ನು ನೀಡಿದರು.

ಮಾರಿಕಾಂಬ ದೇವಸ್ಥಾನದಿಂದ ಜಾಥಾವನ್ನು ಪ್ರಾರಂಭಿಸಿ ಹಳೆ ಬಸ್‌ಸ್ಟ್ಯಾಂಡ್ ಶಿರಸಿ ಮುಖಾಂತರ ಸಿಪಿ ಬಜಾರ್ ರೋಡ್ ನಿಂದ ಸರ್ಕಾರ್ ಹೋಟೆಲ್ ಮಾರ್ಗವಾಗಿ ದೇವಿಕೆರೆಯಿಂದ ಸಾಗಿ ಶಿರಸಿ ಸ್ಕ್ಯಾನ್ ಸೆಂಟರ್ ತನಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಒಟ್ಟು ೧೩ ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಮತ್ತು ಆರೈಕೆದಾರರು, ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಡಾ. ಸುಮನ್ ಹೆಗಡೆ, ಶಿರಸಿ ಸ್ಕ್ಯಾನ್ ಸೆಂಟರ್ ನಿರ್ದೇಶಕರು ರೊ| ಡಾ. ದಿನೇಶ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್‌ಮ್ಯಾನ್ ರೊ| ಮಹೇಶ್ ತೆಲಂಗ, ಶಿರಸಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ| ಸರಸ್ವತಿ ಎನ್ ರವಿ ಹಾಗೂ ರೋಟರಿ ಕ್ಲಬ್ ನ ಇನ್ನಿತರ ಸದಸ್ಯರು, ಶಿರಸಿ ರೋಟರಿ ಕ್ಲಬ್ ಖಜಾಂಚಿ ರೋ| ವಿನಾಯಕ್ ಜೋಶಿ, ಸ್ಕ್ಯಾನ್ ಸೆಂಟರ್‌ನ ಮಣಿಕಂಠ, ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿ ಸಿಬ್ಬಂದಿ ವರ್ಗದವರು, ಹಾಗೂ ವಿದ್ಯಾರ್ಥಿಗಳು ಸೇರಿದಂತೆ ೧೦೦ ಮಂದಿ ಜಾಥದಲ್ಲಿ ಭಾಗವಹಿಸಿದ್ದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya
error: Content is protected !!