23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಿಗೆ ನಗುಮೊಗದ ಸೇವೆಯಿಂದ ಸಂಸ್ಥೆ ಅಭಿವೃದ್ಧಿ ಹೊಂದಿದೆ. ಮುಳಿಯ ವ್ಯವಹಾರಕ್ಕೆ ಸೀಮಿತವಾಗದೆ ಧಾರ್ಮಿಕತೆ, ಸಾಮಾಜಿಕವಾಗಿ ತೊಡಗಿಸಿಕೊಂಡು, ಹಲವಾರು ಹಬ್ಬ ಹರಿದಿನಗಳನ್ನು ಆಚರಿಸುವ ಮೂಲಕ ಜಿಲ್ಲೆಯ ಹಲವಾರು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದ ಸಂಸ್ಥೆ ಮುಳಿಯ ಜುವೆಲ್ಸ್ ಎಂದು ಅಳಂದಗಡಿ ಸಿಎ ಬ್ಯಾಂಕ್ ಅಧ್ಯಕ್ಷ, ಬೆಳ್ತಂಗಡಿ ಇಕೋಫ್ರೇಶ್ ಎಂಟಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಫೆ.೨೪ರಂದು ಬೆಳ್ತಂಗಡಿ ಮುಳಿಯ ಜುವೆಲ್ಸ್ನಲ್ಲಿ ಕಳೆದ ವರ್ಷ ಆಗಷ್ಟ್ ೧೫ರಿಂದ ನವೆಂಬರ್ ೩೦ವರೆಗೆ ನಡೆದಿದ್ದ ಡೈಮಾಂಡ್ ಫೇಸ್ಟ್ ಸಂಧರ್ಭದಲ್ಲಿ ನೀಡಲಾಗಿದ್ದು ಲಕ್ಕಿ ಕೂಪನ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮ್ಯಾನೆಜಿಂಗ್ ಕನ್ಸಲ್‌ಟೆಂಟ್ ವೇಣು ಶರ್ಮ ಮಾತನಾಡಿ, ಕಳೆದ ೬ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗ್ರಾಹಕರು ಸಂಸ್ಥೆಯನ್ನು ಬೆಳೆಸಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಮತ್ತೆ ಡೈಮಾಂಡ್ ಫೇಸ್ಟ್ ಬರುತ್ತದೆ. ೩೦೦ಕ್ಕೂ ಅಧಿಕ ಮಂದಿ ಗ್ರಾಹಕರು ಕೂಪನ್ ಪಡೆದಿದ್ದಾರೆ. ಕಿಸಾನ್ ಸಂಸ್ಥೆಯೊಂದಿಗೆ ಜೊತೆಗೂಡಿ ಡೈಮಾಂಡ್ ಫೇಸ್ಟ್ ಕಾರ್ಯಕ್ರಮ ಆಯೋಜಿಸಲಾಗಿದೆ. ೮೦ ವರ್ಷಗಳ ಇತಿಹಾಸವಿರುವ ಮುಳಿಯ ಸಮಾಜದೊಂದಿಗೆ ಜೊತೆಗೂಡಿ ಕೆಲಸ ಕಾರ್ಯ ಮಾಡಿದ್ದು ಪ್ರಕೃತಿಕವಿಕೋಪದ ಸಂದರ್ಭದಲ್ಲಿ ಜನರೊಂದಿಗೆ ಮುಳಿಯ ನಿಂತಿರುವ ಸಂಸ್ಥೆಯಾಗಿದೆ ಎಂದು ತಿಳಿಸಿದರು.

ಡೈಮಾಂಡ್ ಫೇಸ್ಟ್ನ ಲಕ್ಕಿ ಕೂಪನ್ ಕಾರಿನ ವಿಜೇತರಾಗಿ ಪ್ರಿಯಾಂಕ್ ಶಿರ್ಲಾಲು(೪೨೬೫) ತಮ್ಮ ಮಡಿಗೇರಿಸಿಕೊಂಡಿದ್ದಾರೆ. ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿ, ಸಿಬ್ಬಂದಿ ಅಶ್ವಥ್ ವಂದಿಸಿ, ಕಲಾವಿದ ಉದಯ್ ಕುಮಾರ್ ಲಾಯಿಲ ನಿರೂಪಿಸಿದರು.

Related posts

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!