22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

ಬೆಳ್ತಂಗಡಿ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರಕಾರಿ ಪ್ರೌಢಶಾಲೆಗೆ ಬೆಳ್ತಂಗಡಿಯ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಪ್ರೌಢ ಶಾಲೆಗೆ ಅಗತ್ಯವಿದ್ದ ವಿಜ್ಞಾನ ಪ್ರಯೋಗಾಲಯ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು.

ರೋಟರಿ ಆನ್ಸ್ ಕ್ಲಬ್‌ನ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಶ್ರೀಧರ್ ಮುತುವರ್ಜಿಯಿಂದ ಈ ಉಪಕರಣಗಳು ನೇಲ್ಯಡ್ಕ ಪ್ರೌಢಶಾಲೆಗೆ ಲಭಿಸಿದವು.

ಬೆಳ್ತಂಗಡಿಯ ರೊ. ಯಶವಂತ್ ಪಟವರ್ಧನ್ ಮತ್ತು ಶ್ರೀಮತಿ ರಶ್ಮಿ ಪಟವರ್ಧನ್ ದಂಪತಿ ಈ ಕೊಡುಗೆಯನ್ನು ಪ್ರಾಯೋಜಿಸಿದ್ದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಯಶವಂತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಆಯನ್ಸ್ ಕ್ಲಬ್‌ನ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ. ವಿನಯಾ ಕಿಶೋರ್, ಶ್ರೀಮತಿ ರಶ್ಮಿ ಪಟವರ್ಧನ್, ಶ್ರೀಮತಿ ಹೇಮಾ ಮತ್ತು ಸಂಸ್ಥೆಯ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಹಾಗೂ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಅರವಿಂದ ಗೋಖಲೆ ಸ್ವಾಗತಿಸಿ, ವಿಜಯ ಕುಮಾರ್ ವಂದಿಸಿದರು.

Related posts

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ

Suddi Udaya
error: Content is protected !!