23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವು ಫೆ.೨೧ ಹಾಗೂ ೨೨ರಂದು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸುವ ಈ ಕೂಟವು ಉತ್ಸಾಹಭರಿತ ಸ್ಪರ್ಧೆಗಳು ಮತ್ತು ಉತ್ಸಾಹಭರಿತ ಪ್ರೇಕ್ಷಕರೊಂದಿಗೆ ಸಡಗರಪೂರ್ಣವಾಗಿ ಮುಕ್ತಾಯಗೊಂಡಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಖ್ಯಾತ ದಂತ ವೈದ್ಯ ಡಾ| ಸೂರಜ್ ಉಜಿರೆ ನೆರವೇರಿಸಿ ಮಾತನಾಡಿ ಅವರು ಕ್ರೀಡೆ ಮತ್ತು ಆರೋಗ್ಯದ ಮಹತ್ವವನ್ನು ವಿವರಿಸುತ್ತಾ, “ಕಲಿಕೆಯು ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲ, ಕ್ರೀಡೆಯೂ ಕಲಿಕೆಯ ಒಂದು ಅವಿಭಾಜ್ಯ ಅಂಗವಾಗಿದೆ. ಕ್ರೀಡೆಯು ಕೇವಲ ಸ್ಪರ್ಧೆಗಳಿಗಾಗಿ ಮಾತ್ರವಲ್ಲ, ಅವು ಶಿಸ್ತು, ಒಗ್ಗಟ್ಟನ್ನು ಬೆಳೆಸುತ್ತವೆ” ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ| ಎಂ. ಮಲ್ಲಿಕಾರ್ಜುನ ಗೌಡ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು ತಿಳಿಸಿದರು.

ಪ್ರಸನ್ನ ಸಿ.ಬಿ.ಎಸ್.ಸಿ ಶಾಲಾ ಮುಖ್ಯೋಪಾಧ್ಯಾಯ ಕೆ.ಎಸ್.ಎನ್ ಭಟ್ ಹಾಗೂ ಪ್ರಸನ್ನ ಕೈಗಾರಿಕಾ ತರಬೇತಿ ವಿದ್ಯಾಲಯದ ಪ್ರಾಂಶುಪಾಲ ಅಖಿಲೇಶ್ ಕುಮಾರ್ ರವರು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಪ್ರಾಧ್ಯಾಪಕಿ ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಕ್ರೀಡಾಕೂಟದ ಎರಡೂ ದಿನಗಳೂ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ಆಯೋಜಿಸಲಾಗಿತ್ತು.

Related posts

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಜುಲೈ 16 ಮಂಗಳವಾರ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!