22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವು ಫೆ.೨೧ ಹಾಗೂ ೨೨ರಂದು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸುವ ಈ ಕೂಟವು ಉತ್ಸಾಹಭರಿತ ಸ್ಪರ್ಧೆಗಳು ಮತ್ತು ಉತ್ಸಾಹಭರಿತ ಪ್ರೇಕ್ಷಕರೊಂದಿಗೆ ಸಡಗರಪೂರ್ಣವಾಗಿ ಮುಕ್ತಾಯಗೊಂಡಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಖ್ಯಾತ ದಂತ ವೈದ್ಯ ಡಾ| ಸೂರಜ್ ಉಜಿರೆ ನೆರವೇರಿಸಿ ಮಾತನಾಡಿ ಅವರು ಕ್ರೀಡೆ ಮತ್ತು ಆರೋಗ್ಯದ ಮಹತ್ವವನ್ನು ವಿವರಿಸುತ್ತಾ, “ಕಲಿಕೆಯು ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲ, ಕ್ರೀಡೆಯೂ ಕಲಿಕೆಯ ಒಂದು ಅವಿಭಾಜ್ಯ ಅಂಗವಾಗಿದೆ. ಕ್ರೀಡೆಯು ಕೇವಲ ಸ್ಪರ್ಧೆಗಳಿಗಾಗಿ ಮಾತ್ರವಲ್ಲ, ಅವು ಶಿಸ್ತು, ಒಗ್ಗಟ್ಟನ್ನು ಬೆಳೆಸುತ್ತವೆ” ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ| ಎಂ. ಮಲ್ಲಿಕಾರ್ಜುನ ಗೌಡ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು ತಿಳಿಸಿದರು.

ಪ್ರಸನ್ನ ಸಿ.ಬಿ.ಎಸ್.ಸಿ ಶಾಲಾ ಮುಖ್ಯೋಪಾಧ್ಯಾಯ ಕೆ.ಎಸ್.ಎನ್ ಭಟ್ ಹಾಗೂ ಪ್ರಸನ್ನ ಕೈಗಾರಿಕಾ ತರಬೇತಿ ವಿದ್ಯಾಲಯದ ಪ್ರಾಂಶುಪಾಲ ಅಖಿಲೇಶ್ ಕುಮಾರ್ ರವರು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಪ್ರಾಧ್ಯಾಪಕಿ ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಕ್ರೀಡಾಕೂಟದ ಎರಡೂ ದಿನಗಳೂ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ಆಯೋಜಿಸಲಾಗಿತ್ತು.

Related posts

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya
error: Content is protected !!