25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

ನಡ: ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆ.೨೨ರಂದು ಪೋಷಕರ ಮಹಾಸಭೆ ನಡೆಯಿತು.

ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಪ್ರೇರಕ ಭಾಷಣಕಾರ ಮತ್ತು ಪೋಷಕರ ತಜ್ಞ ರಫೀಕ್ ಮಾಸ್ಟರ್ “ನಮ್ಮ ಹೂಡಿಕೆಯನ್ನು ತಮ್ಮ ಮಕ್ಕಳ ಶಿಕ್ಷಣದ ಮೇಲೆ ಮಾಡಬೇಕು. ಆಗ ಮಕ್ಕಳು ಭವಿಷ್ಯದಲ್ಲಿ ನಮ್ಮ ಆಸ್ತಿಯಾಗುತ್ತಾರೆ ಹಾಗೂ ಪೋಷಕರು ಮಕ್ಕಳಲ್ಲಿ ಇರುವ ಧನಾತ್ಮಕ ಚಿಂತನೆಗಳನ್ನು, ಚಟುವಟಿಕೆಗಳನ್ನು ಹುರಿದುಂಬಿಸಬೇಕು” ಎಂದರು.

ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, , ಕೋಶಾಧಿಕಾರಿ ಸಯ್ಯದ್ ಮಹಮ್ಮದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಅರಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯ ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಸ್ವಾಗತಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ತುಂಬಾ ಮಹತ್ವದ್ದು. ಪೋಷಕರು ಶಿಕ್ಷಕರೊಂದಿಗೆ ಕೈಜೋಡಿಸಿದರೆ ಮಕ್ಕಳು ಕಲಿಕೆಯಲ್ಲಿ ಇನ್ನಷ್ಟು ಮುಂದುವರಿಯಲು ಸಾಧ್ಯ”ಎಂದರು.

ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ ಮಾತನಾಡಿ ಶಾಲೆಯಲ್ಲಿನ ಶಿಕ್ಷಣದ ಪ್ರಗತಿಯನ್ನು ಉತ್ತೇಜಿಸುವಲ್ಲಿ ಪೋಷಕರ ಅಭಿಪ್ರಾಯಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು ಹಾಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಭರವಸೆ ನೀಡಿದರು.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya
error: Content is protected !!