23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

ನಡ: ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆ.೨೨ರಂದು ಪೋಷಕರ ಮಹಾಸಭೆ ನಡೆಯಿತು.

ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಪ್ರೇರಕ ಭಾಷಣಕಾರ ಮತ್ತು ಪೋಷಕರ ತಜ್ಞ ರಫೀಕ್ ಮಾಸ್ಟರ್ “ನಮ್ಮ ಹೂಡಿಕೆಯನ್ನು ತಮ್ಮ ಮಕ್ಕಳ ಶಿಕ್ಷಣದ ಮೇಲೆ ಮಾಡಬೇಕು. ಆಗ ಮಕ್ಕಳು ಭವಿಷ್ಯದಲ್ಲಿ ನಮ್ಮ ಆಸ್ತಿಯಾಗುತ್ತಾರೆ ಹಾಗೂ ಪೋಷಕರು ಮಕ್ಕಳಲ್ಲಿ ಇರುವ ಧನಾತ್ಮಕ ಚಿಂತನೆಗಳನ್ನು, ಚಟುವಟಿಕೆಗಳನ್ನು ಹುರಿದುಂಬಿಸಬೇಕು” ಎಂದರು.

ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, , ಕೋಶಾಧಿಕಾರಿ ಸಯ್ಯದ್ ಮಹಮ್ಮದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಅರಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯ ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಸ್ವಾಗತಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ತುಂಬಾ ಮಹತ್ವದ್ದು. ಪೋಷಕರು ಶಿಕ್ಷಕರೊಂದಿಗೆ ಕೈಜೋಡಿಸಿದರೆ ಮಕ್ಕಳು ಕಲಿಕೆಯಲ್ಲಿ ಇನ್ನಷ್ಟು ಮುಂದುವರಿಯಲು ಸಾಧ್ಯ”ಎಂದರು.

ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ ಮಾತನಾಡಿ ಶಾಲೆಯಲ್ಲಿನ ಶಿಕ್ಷಣದ ಪ್ರಗತಿಯನ್ನು ಉತ್ತೇಜಿಸುವಲ್ಲಿ ಪೋಷಕರ ಅಭಿಪ್ರಾಯಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು ಹಾಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಭರವಸೆ ನೀಡಿದರು.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya
error: Content is protected !!