25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರಧಾನ ಕಾರ್ಯಕ್ರಮವು ಫೆ.22ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ| ಅಬೆಲ್ ಲೋಬೊ ವಹಿಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಪ್ರಾಂಶುಪಾಲ ಫಾ| ವಿಜಯ್ ಲೋಬೊ ಮಾತನಾಡಿ ವಿದ್ಯಾರ್ಥಿಗಳು ಸಮಾಜದ ದೀಪಗಳಾಗಿ ಬೆಳಗುವಂತೆ ಕರೆಯಿತ್ತರು.

ವಿದ್ಯಾರ್ಥಿಗಳು ಜಗತ್ತಿನ ಬೆಳಕಾಗುವಂತೆ ದೀಪ ಪ್ರಧಾನ ಮಾಡಲಾಯಿತು. 9ನೇ ತರಗತಿಯ ವಿದ್ಯಾರ್ಥಿ ಫಾತಿಮತ್ ಶಿಯಾ ಎಲ್ಲಾ ಕಿರಿಯ ವಿದ್ಯಾರ್ಥಿಗಳ ಪರವಾಗಿ ಶುಭ ಹಾರೈಸಿದರು.

ಕಿರಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮನೋರಂಜನಾ ಕ್ರೀಡೆಗಳನ್ನು ನಡೆಸಿಕೊಟ್ಟರು. ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಂಸ್ಥೆಗೆ 10ನೇ ತರಗತಿಯ ವಿದ್ಯಾರ್ಥಿಗಳು ಜೆರಾಕ್ಸ್ ಯಂತ್ರವನ್ನು ಕಾಣಿಕೆಯಾಗಿ ನೀಡಿದರು. ಕು. ಶ್ರಾವನ್ಯ ಮತ್ತು ಜೆವಿಟಾ

ಕಾರ್ಯಕ್ರಮ ನಿರೂಪಿಸಿದರು. ರೋಸಾ ಜೋಯ್ ಸ್ವಾಗತಿಸಿ, ಇಶ್ಮಾ ಫಾತಿಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅನುದೀಪ ೨೦೨೪-೨೫ರ ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು.

Related posts

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya
error: Content is protected !!