September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

ಉಜಿರೆ: ನೀವು ಉದ್ಯಮಶೀಲರಾಬೇಕಾದರೆ ಸಂವಹನ ಕೌಶಲ್ಯ ಇರಬೇಕು, ಒಬ್ಬ ಉದ್ಯಮಿ ಉದ್ಯಮದ ಲಾಭ-ನಷ್ಟಗಳನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಇರಬೇಕು. ನೀವು ಆರಂಭಿಸುವ ಉದ್ಯಮಕ್ಕೆ ಒಂದು ಸರಿಯಾದ ದೃಷ್ಟಿಕೋನ ಇರಬೇಕು. ಪ್ರಾಮಾಣಿಕತೆ ಇರಬೇಕು. ನಿಮ್ಮ ಸ್ವಷ್ಟವಾದ ಗುರಿ, ಉದ್ದೇಶ ಇದ್ದು, ನೀವು ಪ್ರಾಮಾಣಿಕರಾಗಿದ್ದರೆ ನಿಮಗೆ ಬೇರೆ ಬೇರೆ ಮೂಲಗಳಿಂದ ಹಣಕಾಸು ನೆರವು ಬರುತ್ತದೆ. ಇದರ ಜೊತೆಗೆ ಹಣಕಾಸಿನ ನಿರ್ವಹಣೆ ಅಂದರೆ ಸರಿಯಾದ ಲೆಕ್ಕಚಾರ ನೀವು ಇಟ್ಟುಕೊಳ್ಳಬೇಕು. ಇನ್ನು ಉದ್ಯಮಕ್ಕೆ ಬೇಕಾಗುವ ಕೆಲಸಗಾರನ್ನು ನೇಮಿಸಿಕೊಳ್ಳವಾಗ ಅಭ್ಯರ್ಥಿಯ ಮನೋಭಾವನೆಯನ್ನು ನೋಡಿಕೊಂಡು ಆಯ್ಕೆ ಮಾಡಿಕೊಳ್ಳಿ. ಹಂತ ಹಂತವಾಗಿ ಬಂಡವಾಳವನ್ನು ತೊಡಗಿಸಿಕೊಂಡು ಮುಂದುವರೆಯರಿ. ಉದ್ಯಮಶೀಲರಾಗಬೇಕಾದರೆ ಕೇವಲ ಜ್ಞಾನ ಅಥವಾ ಐದಿಯಾ ಇದ್ದರೆ ಸಾಲದು ಅದನ್ನು ಕಾರ್ಯರೂಪಕ್ಕೆ ತರುವ ಜಾಣ್ಮೆ ಇರಬೇಕು. ಉದ್ಯಮದ ಮೊದಲ ಗ್ರಾಹಕರನ್ನು ಯಾವುತ್ತೂ ಮರೆಯಬೇಡಿ ಯಾಕೆಂದರೆ ಅವರು ನಿಮ್ಮ ಮೇಲೆ ಮೊದಲು ನಂಬಿಕೆ ಇಟ್ಟಿವರು ಎಂದು ನಿಡ್ಲೆ ಅಗ್ರಿಲೀಫ್ ಎಕ್ಸಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೆಜಿಂಗ್ ಡೈರೆಕ್ಟರ್ ಅವಿನಾಶ್ ರಾವ್ ಅಭಿಪ್ರಾಯಪಟ್ಟರು.

ಅವರು ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಅಶೋಕ ಕುಮಾರ್ ಮಾತನಾಡಿ ಸ್ವ ಉದ್ಯೋಗಕ್ಕೆ ಬೇಕಾದ ಮಾಹಿತಿ ಮಾರ್ಗದರ್ಶನ ನೀಡಿದ ರುಡ್ ಸೆಟ್ ಸಂಸ್ಥೆಯ ಕಾರ್ಯವನ್ನು ಅಭಿನಂದಿಸಿ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಡಿ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನವನ್ನು ಸಹ ನೆನಪಿಸಿಕೊಂಡು.

ಕು. ಕೀರ್ತನಾ ಮತ್ತು ಕು. ಪ್ರತಿಷ್ಟಾ ಪ್ರಾರ್ಥಿಸಿದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಕೆ. ಕರುಣಾಕರ ಜೈನ್ ವಂದಿಸಿದರು. ಸುಮಾರು ೩೩ ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು.

Related posts

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya
error: Content is protected !!