September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

ಬೆಳ್ತಂಗಡಿ: ಲಾಯಿಲ ಗ್ರಾಮದ ಹಳೆಪೇಟೆ- ಕುತ್ರೋಟ್ಟು ಹೋಗುವ ರಸ್ತೆ, ಚರಂಡಿ, ಡಾಮರು ರಸ್ತೆ ಮಾಡಿಕೊಡುವಂತೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿ ರಕ್ಶಿತ್ ಶಿವರಾಮ್ ರವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಕ್ಶಿತ್ ಶಿವರಾಮ್ ಸಂಬಂಧಪಟ್ಟ ಕಂಟ್ರಾಕ್ಟರ್, ಇಂಜಿನಿಯರ್, ಲೋಕೋಪಯೋಗಿ ಅಧಿಕಾರಿಗಳಿಗೆ ಕರೆ ಮಾಡಿ ಆದಷ್ಟು ಶೀಘ್ರವಾಗಿ ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯಂತೆ ಫೆ.24ರಿಂದ ರಸ್ತೆ ಕಾಮಗಾರಿಯ ಕೆಲಸ ಪ್ರಾರಂಭವಾಗಿದ್ದು, ಈ ಕಾಮಗಾರಿ ನಡೆಯಲು ಪ್ರಮುಖ ಕಾರಣಕರ್ತರಾದ ರಕ್ಷಿತ್ ಶಿವರಾಮ್ ಅವರಿಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿ ಹಾಗು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಯು ಕೆ ಹನೀಫ್,ಯೂಥ್ ಕಾಂಗ್ರೆಸ್ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರಹ್ಮಾನ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಮೊಹಮ್ಮದ್ ಕುಂಞಿ ಕತಾರ್, ಗ್ರಾಮ ಪಂಚಾಯತ್ ಸದಸ್ಯರಾದ ರೇವತಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶರೀಫ್ ಕುಂಟಿನಿ ಹಾಗೂ ಇಂಜಿನಿಯರ್ ಆಗಿರುವ ಎಸ್ ಬಿ ಹಮೀದ್, ಉಮರ್ ಕುಂಞಿ ನಾಡ್ಜೆ,ಉಸ್ಮಾನ್, ಉಬೈದ್,ಹಮೀದ್ ಇಕ್ಬಾಲ್ ಝಮೀರ್ ಹಾಗು ಇನ್ನಿತರ ಕಾಂಗ್ರೆಸ್ನ ಕಾರ್ಯಕರ್ತರು ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya
error: Content is protected !!