23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿ

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

ಬೆಳ್ತಂಗಡಿ: ಸೇವಾಧಾಮ-ಸೇವಾಭಾರತಿ ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಶಿರಸಿ ಸ್ಕ್ಯಾನ್ ಸೆಂಟರ್, ರೋಟರಿ ಕ್ಲಬ್ ಶಿರಸಿ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಶಿರಸಿ ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೇ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಕರೆ ತರುವ ಉದ್ದೇಶದಿಂದ ಫೆ.೨೪ರಂದು ಜಾಥಾವನ್ನು ನಡೆಸಲಾಯಿತು. ಶಿರಸಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಗಪ್ಪ ಹಸಿರು ನಿಷಾನೆಯನ್ನು ಹಾರಿಸಿ ಜಾಥಾಕ್ಕೆ ಚಾಲನೆಯನ್ನು ನೀಡಿದರು.

ಮಾರಿಕಾಂಬ ದೇವಸ್ಥಾನದಿಂದ ಜಾಥಾವನ್ನು ಪ್ರಾರಂಭಿಸಿ ಹಳೆ ಬಸ್‌ಸ್ಟ್ಯಾಂಡ್ ಶಿರಸಿ ಮುಖಾಂತರ ಸಿಪಿ ಬಜಾರ್ ರೋಡ್ ನಿಂದ ಸರ್ಕಾರ್ ಹೋಟೆಲ್ ಮಾರ್ಗವಾಗಿ ದೇವಿಕೆರೆಯಿಂದ ಸಾಗಿ ಶಿರಸಿ ಸ್ಕ್ಯಾನ್ ಸೆಂಟರ್ ತನಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಒಟ್ಟು ೧೩ ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಮತ್ತು ಆರೈಕೆದಾರರು, ಶಿರಸಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಡಾ. ಸುಮನ್ ಹೆಗಡೆ, ಶಿರಸಿ ಸ್ಕ್ಯಾನ್ ಸೆಂಟರ್ ನಿರ್ದೇಶಕರು ರೊ| ಡಾ. ದಿನೇಶ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್‌ಮ್ಯಾನ್ ರೊ| ಮಹೇಶ್ ತೆಲಂಗ, ಶಿರಸಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ| ಸರಸ್ವತಿ ಎನ್ ರವಿ ಹಾಗೂ ರೋಟರಿ ಕ್ಲಬ್ ನ ಇನ್ನಿತರ ಸದಸ್ಯರು, ಶಿರಸಿ ರೋಟರಿ ಕ್ಲಬ್ ಖಜಾಂಚಿ ರೋ| ವಿನಾಯಕ್ ಜೋಶಿ, ಸ್ಕ್ಯಾನ್ ಸೆಂಟರ್‌ನ ಮಣಿಕಂಠ, ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿ ಸಿಬ್ಬಂದಿ ವರ್ಗದವರು, ಹಾಗೂ ವಿದ್ಯಾರ್ಥಿಗಳು ಸೇರಿದಂತೆ ೧೦೦ ಮಂದಿ ಜಾಥದಲ್ಲಿ ಭಾಗವಹಿಸಿದ್ದರು.

Related posts

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!