ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಿಗೆ ನಗುಮೊಗದ ಸೇವೆಯಿಂದ ಸಂಸ್ಥೆ ಅಭಿವೃದ್ಧಿ ಹೊಂದಿದೆ. ಮುಳಿಯ ವ್ಯವಹಾರಕ್ಕೆ ಸೀಮಿತವಾಗದೆ ಧಾರ್ಮಿಕತೆ, ಸಾಮಾಜಿಕವಾಗಿ ತೊಡಗಿಸಿಕೊಂಡು, ಹಲವಾರು ಹಬ್ಬ ಹರಿದಿನಗಳನ್ನು ಆಚರಿಸುವ ಮೂಲಕ ಜಿಲ್ಲೆಯ ಹಲವಾರು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದ ಸಂಸ್ಥೆ ಮುಳಿಯ ಜುವೆಲ್ಸ್ ಎಂದು ಅಳಂದಗಡಿ ಸಿಎ ಬ್ಯಾಂಕ್ ಅಧ್ಯಕ್ಷ, ಬೆಳ್ತಂಗಡಿ ಇಕೋಫ್ರೇಶ್ ಎಂಟಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆ ಬಳಂಜ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಫೆ.೨೪ರಂದು ಬೆಳ್ತಂಗಡಿ ಮುಳಿಯ ಜುವೆಲ್ಸ್ನಲ್ಲಿ ಕಳೆದ ವರ್ಷ ಆಗಷ್ಟ್ ೧೫ರಿಂದ ನವೆಂಬರ್ ೩೦ವರೆಗೆ ನಡೆದಿದ್ದ ಡೈಮಾಂಡ್ ಫೇಸ್ಟ್ ಸಂಧರ್ಭದಲ್ಲಿ ನೀಡಲಾಗಿದ್ದು ಲಕ್ಕಿ ಕೂಪನ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮ್ಯಾನೆಜಿಂಗ್ ಕನ್ಸಲ್‌ಟೆಂಟ್ ವೇಣು ಶರ್ಮ ಮಾತನಾಡಿ, ಕಳೆದ ೬ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗ್ರಾಹಕರು ಸಂಸ್ಥೆಯನ್ನು ಬೆಳೆಸಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಮತ್ತೆ ಡೈಮಾಂಡ್ ಫೇಸ್ಟ್ ಬರುತ್ತದೆ. ೩೦೦ಕ್ಕೂ ಅಧಿಕ ಮಂದಿ ಗ್ರಾಹಕರು ಕೂಪನ್ ಪಡೆದಿದ್ದಾರೆ. ಕಿಸಾನ್ ಸಂಸ್ಥೆಯೊಂದಿಗೆ ಜೊತೆಗೂಡಿ ಡೈಮಾಂಡ್ ಫೇಸ್ಟ್ ಕಾರ್ಯಕ್ರಮ ಆಯೋಜಿಸಲಾಗಿದೆ. ೮೦ ವರ್ಷಗಳ ಇತಿಹಾಸವಿರುವ ಮುಳಿಯ ಸಮಾಜದೊಂದಿಗೆ ಜೊತೆಗೂಡಿ ಕೆಲಸ ಕಾರ್ಯ ಮಾಡಿದ್ದು ಪ್ರಕೃತಿಕವಿಕೋಪದ ಸಂದರ್ಭದಲ್ಲಿ ಜನರೊಂದಿಗೆ ಮುಳಿಯ ನಿಂತಿರುವ ಸಂಸ್ಥೆಯಾಗಿದೆ ಎಂದು ತಿಳಿಸಿದರು.

ಡೈಮಾಂಡ್ ಫೇಸ್ಟ್ನ ಲಕ್ಕಿ ಕೂಪನ್ ಕಾರಿನ ವಿಜೇತರಾಗಿ ಪ್ರಿಯಾಂಕ್ ಶಿರ್ಲಾಲು(೪೨೬೫) ತಮ್ಮ ಮಡಿಗೇರಿಸಿಕೊಂಡಿದ್ದಾರೆ. ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿ, ಸಿಬ್ಬಂದಿ ಅಶ್ವಥ್ ವಂದಿಸಿ, ಕಲಾವಿದ ಉದಯ್ ಕುಮಾರ್ ಲಾಯಿಲ ನಿರೂಪಿಸಿದರು.

Related posts

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya
error: Content is protected !!