39.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

ನಡ: ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆ.೨೨ರಂದು ಪೋಷಕರ ಮಹಾಸಭೆ ನಡೆಯಿತು.

ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಪ್ರೇರಕ ಭಾಷಣಕಾರ ಮತ್ತು ಪೋಷಕರ ತಜ್ಞ ರಫೀಕ್ ಮಾಸ್ಟರ್ “ನಮ್ಮ ಹೂಡಿಕೆಯನ್ನು ತಮ್ಮ ಮಕ್ಕಳ ಶಿಕ್ಷಣದ ಮೇಲೆ ಮಾಡಬೇಕು. ಆಗ ಮಕ್ಕಳು ಭವಿಷ್ಯದಲ್ಲಿ ನಮ್ಮ ಆಸ್ತಿಯಾಗುತ್ತಾರೆ ಹಾಗೂ ಪೋಷಕರು ಮಕ್ಕಳಲ್ಲಿ ಇರುವ ಧನಾತ್ಮಕ ಚಿಂತನೆಗಳನ್ನು, ಚಟುವಟಿಕೆಗಳನ್ನು ಹುರಿದುಂಬಿಸಬೇಕು” ಎಂದರು.

ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, , ಕೋಶಾಧಿಕಾರಿ ಸಯ್ಯದ್ ಮಹಮ್ಮದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಅರಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯ ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಸ್ವಾಗತಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ತುಂಬಾ ಮಹತ್ವದ್ದು. ಪೋಷಕರು ಶಿಕ್ಷಕರೊಂದಿಗೆ ಕೈಜೋಡಿಸಿದರೆ ಮಕ್ಕಳು ಕಲಿಕೆಯಲ್ಲಿ ಇನ್ನಷ್ಟು ಮುಂದುವರಿಯಲು ಸಾಧ್ಯ”ಎಂದರು.

ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ ಮಾತನಾಡಿ ಶಾಲೆಯಲ್ಲಿನ ಶಿಕ್ಷಣದ ಪ್ರಗತಿಯನ್ನು ಉತ್ತೇಜಿಸುವಲ್ಲಿ ಪೋಷಕರ ಅಭಿಪ್ರಾಯಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು ಹಾಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಭರವಸೆ ನೀಡಿದರು.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya
error: Content is protected !!