23.9 C
ಪುತ್ತೂರು, ಬೆಳ್ತಂಗಡಿ
February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ
ಅಹಲ್ಯ ಬಾಯಿ ಹೋಳ್ಕರ್ – ಜೀವನಗಾಥೆ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ಭವ್ಯಾ ಮಾತನಾಡಿ “ಪತಿಯ ಮರಣ ಮೃದಂಗದೊಡನೆ ಕಾರ್ಮೋಡ ಕವಿದರೂ, ತನ್ನವರ ಅಗಲುವಿಕೆಯ ಬಿಸಿಯ ಶಾಖವಿದ್ದರೂ, ವಿರಕ್ತಿಯ ಬೇಗೆಯಲ್ಲಿ ಬೆಂದು ನೊಂದು ಭಾವ ಬರಿದಾದರೂ ಎದೆಗುಂದದೆ ದಿಟ್ಟತನದಿಂದ ಸುಂಟರಗಾಳಿಯಂತೆ ರಾಜ್ಯೋದ್ಧಾರದ ಕಡೆಗೆ, ಪ್ರಜೆಗಳ ಹಿತ ದೃಷ್ಟಿಯಿಂದ ಎದ್ದು ನಿಂತವಳು ಅಹಲ್ಯಾ ಬಾಯಿ ಹೋಳ್ಕರ್. ಜನರ ಒಳಿತಿಗಾಗಿ ಜನಜನಿತರಾದ ಅಹಲ್ಯಾಬಾಯಿ ಎಂಬ ಅರುಂಧತಿ ನಕ್ಷತ್ರ ಭಾರತೀಯ ಚರಿತೆಯ ನಂದಾದೀಪ”ಎಂದರು.


ಮಹಿಳಾ ಪ್ರಕಾರ ತಾಲೂಕು ಘಟಕದ ಅಧ್ಯಕ್ಷೆ ಆಶಾ ಅಡೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅ.ಭಾ.ಸ.ಪ ತಾಲೂಕು ಸಮಿತಿ ಅಧ್ಯಕ್ಷ ಪ್ರೊ. ಗಣಪತಿ ಭಟ್ ಕುಳಮರ್ವ,ವಿಭಾಗ ಸoಯೋಜಕ ಸುಂದರ ಶೆಟ್ಟಿ ಇಳಂತಿಲ, ಕಾರ್ಯಕಾರಿಣಿ ಸದಸ್ಯ ಗುರುನಾಥ್ ಪ್ರಭು, ಸಮಿತಿಯ ಸಹ ಕಾರ್ಯದರ್ಶಿ ಸಂತೋಷಿನಿ, ಘಟಕದ ಸಹಕಾರ್ಯದರ್ಶಿ ವನಜಾ ಜೋಷಿ,ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.


ತಾಲೂಕು ಸಮಿತಿಯ ಕಾರ್ಯದರ್ಶಿ ಸುಭಾಷಿಣಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಕಾರ್ಯದರ್ಶಿ ವಿನುತಾ ರಜತ್ ಗೌಡ ಸ್ವಾಗತಿಸಿದರು.ಮಹಿಳಾ ಪ್ರಕಾರದ ಪ್ರಮುಖ್ ವನಿತಾ ಶೆಟ್ಟಿ ವಂದಿಸಿದರು. ತಾಲೂಕು ಸಮಿತಿಯ ಸಾಹಿತ್ಯ ಕೂಟ್ ಪ್ರಮುಖ್ ಅಶ್ವಿಜಾ ಶ್ರೀಧರ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya
error: Content is protected !!